ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರ 11 ವರ್ಷಗಳ ಅಧಿಕಾರಾವಧಿಯಲ್ಲಿ 33 ತಪ್ಪುಗಳು ನಡೆದಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ‘ಸುಳ್ಳು ಹೇಳುವುದು’, ಯುವಕರನ್ನು ವಂಚಿಸುವುದು, ‘ಬಡವರನ್ನು ದಾರಿ ತಪ್ಪಿಸಿ ಮತ ಗಳಿಸುವುದು’... ಹೀಗೆ
ಒಂದಲ್ಲಾ ಎರಡಲ್ಲಾ ಬರೋಬ್ಬರಿ 33 ತಪ್ಪುಗಳನ್ನು ಮಾಡಿದೆ. ಈ ರೀತಿ ಮೋಸಗೊಳಿಸುವ
ಪ್ರಧಾನಿಯನ್ನು ನಾನು ಎಂದೂ ನೋಡಿಲ್ಲ ಎಂದು ಕಿಡಿಕಾರಿದ್ದಾರೆ.
ನನ್ನ
65 ವರ್ಷಗಳ ರಾಜಕೀಯ ಮತ್ತು 55 ವರ್ಷಗಳ ಅಧಿಕಾರದಲ್ಲಿ ಅವರಂತಹ ಪ್ರಧಾನಿಯನ್ನು ಭೇಟಿಯಾಗಿಲ್ಲ. ಮೋದಿ ತಾವು
ಮಾಡಿದ್ದ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ, ಕ್ಷಮೆ ಸಹ ಯಾಚಿಸುವುದಿಲ್ಲ ಎಂದು
ಟೀಕಿಸಿದ್ದಾರೆ.
ಬಿಜೆಪಿ
ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರು 11 ವರ್ಷಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಹೇಳಲಿ ಎಂದರು.
ಪ್ರಧಾನಿ
ನರೇಂದ್ರ ಮೋದಿ ಅವರು ಚುನಾವಣೆ ವೇಳೆ ಎಷ್ಟು ಭರವಸೆಗಳನ್ನು ನೀಡಿದ್ದಾರೆ ಮತ್ತು ಅವುಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂಬದನ್ನು ದೇಶದ ಜನತೆಗೆ ತಿಳಿಸಬೇಕು ಎಂದರು.
ನರೇಂದ್ರ
ಮೋದಿ ಒಬ್ಬ ಸುಳ್ಳುಗಾರ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ನಂಬಿಕೆಯಿಲ್ಲದ ವ್ಯಕ್ತಿ ಎಂದು ಟೀಕಿಸಿದ ಖರ್ಗೆ, ಇಷ್ಟೊಂದು ಸುಳ್ಳು ಹೇಳುವ ಮತ್ತು ಜನರನ್ನು ತನ್ನ "ಬಲೆಗೆ ಬೀಳಿಸುವ" ಹಾಗೂ ಯುವಕರನ್ನು ವಂಚಿಸುವ ಪ್ರಧಾನಿಯನ್ನು ನಾನು ಎಂದಿಗೂ ನೋಡಿಲ್ಲ ಎಂದರು.
ಯುಪಿಎ
ಮತ್ತು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ, ವಿರೋಧ ಪಕ್ಷಗಳ ನಾಯಕರಿಗೆ ಲೋಕಸಭೆಯಲ್ಲಿ ಉಪಸಭಾಪತಿ ಹುದ್ದೆಯನ್ನು ನೀಡಲು ಅವಕಾಶ ನೀಡುತ್ತಿತ್ತು. ಆದರೆ ಪ್ರಸ್ತುತ ಎನ್ಡಿಎ ಸರ್ಕಾರವು ಕಳೆದ 11 ವರ್ಷಗಳಿಂದ ಲೋಕಸಭೆಯಲ್ಲಿ ಉಪಸಭಾಪತಿ ಹುದ್ದೆಯನ್ನು ಖಾಲಿ ಇರಿಸಿದೆ ಮತ್ತು ವಿರೋಧ ಪಕ್ಷಗಳ ನಾಯಕರಿಗೆ ಆ ಹುದ್ದೆಗೆ ಅವಕಾಶ
ನೀಡುವ ಹಿಂದಿನ ಸ್ಪೀಕರ್ ಆದೇಶವನ್ನು ಮುರಿದಿದೆ ಎಂದರು.
ವಾಜಪೇಯಿ
ಸರ್ಕಾರ ಮಾಡಿದ ಕೆಲಸಗಳನ್ನು ಯುಪಿಎ ಹಲವಾರು ಬಾರಿ ಶ್ಲಾಘಿಸಿತು, ಆದರೆ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ನಮ್ಮ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಶ್ಲಾಘಿಸುವ ಬದಲು, ಪ್ರಸ್ತುತ ಎನ್ಡಿಎ ಸರ್ಕಾರ ನಮ್ಮನ್ನು ದೂಷಿಸಿತು ಮತ್ತು ನಮ್ಮ ಸರ್ಕಾರವು ಹಿಂದೆ ಮಾಡಿದ ಅನೇಕ ಕೆಲಸಗಳನ್ನು ನಿಲ್ಲಿಸಿದೆ ಎಂದು ಖರ್ಗೆ ಆರೋಪಿಸಿದರು.