ಕಾರಂಜಿಮಠದಲ್ಲಿ 283ನೇ ಶಿವಾನುಭವ
ಬೆಳಗಾವಿ 30 : ಶಿವಬಸವನಗರ ಕಾರಂಜಿ ಮಠದ ಶಿವಾನುಭವ ಮಂಟಪದಲ್ಲಿ 283ನೇ ಶಿವಾನುಭವ ಕಾರ್ಯಕ್ರಮವು ಸೋಮವಾರ ದಿನಾಂಕ 3 ಫೆಬ್ರುವರಿ 2025ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾ ಸ್ವಾಮಿಗಳು ವಹಿಸಲಿದ್ದು, ಡಾ. ಗುರುದೇವಿ ಹುಲೆಪ್ಪನವರಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಮುಖ್ಯಸ್ಥರಾದ ಜಯಶ್ರೀ ಎ .ಎಂ. "ಶರಣರ ಆರ್ಥಿಕ ಚಿಂತನೆಗಳು" ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.