ಮಗುವಿಗೊಂದು ಮರ ಶಾಲೆಗೊಂದು ವನ
ಮುಂಡಗೋಡ 06 : ತಾಲೂಕಿನ ಬಾಳೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಸಸಿಗಳನ್ನು ಶಾಲಾ ಪರಿಸರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಟ್ಟು ಸಂತಸಪಟ್ಟರು. ಮಗುವಿಗೊಂದು ಮರ ಶಾಲೆಗೊಂದು ವನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಬಾಳೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಆಚರಿಸಲಾಯಿತು.
ತಾಲೂಕಿನ ಬಾಳೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಉತ್ತಮ ಗುಣಮಟ್ಟದ ಅಡಿಕೆ ಸಸಿಗಳನ್ನು ಹಚ್ಚಲಾಯಿತು. ಈ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಳೆಹಳ್ಳಿ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ಭಜಂತ್ರಿ, ರಮೇಶ್ ಅಂಬಿಗೇರ, ಪಾಂಡುರಂಗ ಟಿಂಕೋಜಿ ಪ್ರದೀಪ್ ಕುಲಕರ್ಣಿ, ನಾಗರಾಜ್ ನಾಯ್ಕ್, ನಾಗೇಂದ್ರ, ಆಓ ಜಾಧವ ಬಾಳೆಹಳ್ಳಿ ಶಾಲೆಯ ಖಆಒಅ ಅಧ್ಯಕ್ಷರು ಗಂಗಾರಾಮ, ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.