ಆಸ್ಪತ್ರೆಗಳಲ್ಲಿರುವ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಪರಿಶಿಲನೆ ನಡೆಸಿ ವರದಿ ಸಲ್ಲಿಸುವಂತೆ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
ವಿಜಯಪುರ 10: ಜಿಲ್ಲೆಯಲ್ಲಿ ನೋಂದಾಯಿತ ಪಿ.ಸಿ.್ಘಪಿ.ಟಿ.ಎನ್.ಡಿಟಿ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಅನೀರೀಕ್ಷಿತ ಭೇಟಿ ನೀಡಿ, ಸೆಂಟರ್ಗಳು ಕಾಯ್ದೆಯನ್ವಯ ಕಾರ್ಯ ನಿರ್ವಹಣೆ ನಡೆಸುತ್ತಿರುವ ಕುರಿತು ಪರೀಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿ.ಸಿ.್ಘಪಿ.ಟಿ.ಎನ್.ಡಿ.ಟಿ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಜಂಟಿಯಾಗಿ ವಿವಿಧ ಆಸ್ಪತ್ರೆಗಳಲ್ಲಿರುವ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಅನೀರೀಕ್ಷಿತವಾಗಿ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ವರದಿ ನೀಡುವಂತೆ ಅವರು ಸೂಚಿಸಿದರು. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್ಗಳ ಯಂತ್ರಗಳ ಮಾಹಿತಿ ಒದಗಿಸಲು ಹೊರಡಿಸಲಾದ ಸುತ್ತೋಲೆಯಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮಾಹಿತಿ ಒದಗಿಸದೆ ಇದ್ದ ಸ್ಕ್ಯಾನಿಂಗ್ ಸೆಂಟರ್ಗಳ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಅವರು ಸೂಚಿಸಿದರು. ಸ್ಕ್ಯಾನಿಂಗ್ ಸೆಂಟರ್ಗಳಿಗೆ ಭೇಟಿ ನೀಡುವ ಸಂದರ್ಭಗಳಲ್ಲಿ ಡಿ.ಇ.ಸಿ ತಂಡದ ಸದಸ್ಯರು ಜಂಟಿಯಾಗಿ ಭೇಟಿ ನೀಡಿ ಪರೀಶೀಲನೆ ನಡೆಸಬೇಕು. ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸ್ಕ್ಯಾನಿಂಗ್ ಸೆಂಟರಿಗೆ ಸ್ವೀಕರಿಸುವ ಅರ್ಜಿಗಳನ್ನು ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ಸಮಿತಿಯ ಮುಂದೆ ಮಂಡಿಸುವತ್ತ ಕ್ರಮವಹಿಸಲು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಸಲಹಾ ಸಮೀತಿ ಡಾ.ಎಸ್.ಆರ್ ಬಿದರಿ, ಡಾ.ಎಸ್.ಎಸ್. ಕಲ್ಯಾಣಶೆಟ್ಟಿ, ಡಾ. ಜಿ.ಎಸ್ ಕಡಕೋಳ, ಡಾ. ಎಸ್.ಎ ಶಿವಗೊಂಡ, ಶ್ರೀಮತಿ ವಿಜಯಾ ಬಾಳಿ, ಡಾ. ರಾಜೇಶ್ವರಿ ಗೋಲಗೇರಿ, ಡಾ. ಪಿ.ಬಿ. ದೇವಮಾನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.