ಸಮಬಾಳು ಮತ್ತು ಸಮಪಾಲು ಅಂಬೇಡ್ಕರ್ ಅವರ ಆಶಯವಾಗಿತ್ತು: ಶಾಸಕ ರಾಜುಗೌಡ.

Equal pay and equal share was Ambedkar's wish: MLA Rajugowda.

ಸಮಬಾಳು ಮತ್ತು ಸಮಪಾಲು ಅಂಬೇಡ್ಕರ್ ಅವರ ಆಶಯವಾಗಿತ್ತು: ಶಾಸಕ ರಾಜುಗೌಡ. 

ದೇವರಹಿಪ್ಪರಗಿ 10 :“ಸಮ ಬಾಳು ಮತ್ತು ಸಮ ಪಾಲು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದು ಈಡೇರಬೇಕಾದರೆ, ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು. ಈ ನಿಟ್ಟಿನಲ್ಲಿ ನಮ್ಮೆಲ್ಲರ ಮೇಲೆ ಮಹತ್ತರವಾದ ಜವಾಬ್ದಾರಿಗಳಿವೆ. ಅವುಗಳನ್ನು ನಿರ್ವಹಿಸುವ ಮೂಲಕ ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಬೇಕು. ಆ ಮೂಲಕ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.ತಾಲೂಕಿನ ಯಲಗೋಡ ಗ್ರಾಮದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,’ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದಾಗಿ ನಾವೆಲ್ಲರೂ ಇಂದು ಈ ಸ್ಥಿತಿಯಲ್ಲಿದ್ದೇವೆ. ಇಲ್ಲದಿದ್ದರೆ, ನಮ್ಮ ಪರಿಸ್ಥಿತಿಯನ್ನು ಊಹಿಸಿಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ನೂರಾರು ವರ್ಷಗಳಿಂದ ಅವಕಾಶ ವಂಚಿತರಾದವರಿಗೆ ಸಂವಿಧಾನದತ್ತವಾಗಿ ಹಲವು ಸೌಲಭ್ಯಗಳನ್ನು ಕೊಟ್ಟರು. ರಾಜಕೀಯವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನಾವು ಸ್ವಾವಲಂಬಿಗಳಾಗಿ ಬದುಕಲು ಬುನಾದಿ ಹಾಕಿದರು’ಗ್ರಾಮ ಮಟ್ಟದ ಭವನಗಳನ್ನು ಸ್ವಂತ ಮನೆಗಳಂತೆ ಎಲ್ಲರೂ ನೋಡಿಕೊಳ್ಳಬೇಕು ಹಾಗೂ ಕ್ಷೇತ್ರದ ವಂದಾಲ ಗ್ರಾಮದ ಪ್ರಗತಿ ಕಾಲೋನಿಯಲ್ಲಿ ಸುಮಾರು 50 ಲಕ್ಷ ರೂ ವೆಚ್ಚದ ಸಿ.ಸಿ ರಸ್ತೆ ಕಾಮಗಾರಿ ಹಾಗೂ ಪೀರಾಪುರ-ಅಮಲ್ಯಾಳ ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಸುಮಾರು 2ಕೋಟಿ ರೂ ವೆಚ್ಚದಲ್ಲಿ ಇಂದು ಭೂಮಿ ಪೂಜೆ ನೆರವೇರಿಸಲಾಗಿದೆ, ಶೀಘ್ರದಲ್ಲಿ ನಿಮ್ಮೆಲ್ಲರ ಅಪೇಕ್ಷೆಯಂತೆ ದೇವರಹಿಪ್ಪರಗಿ ಪಟ್ಟಣದಲ್ಲಿ ಸುಮಾರು 2ಕೋಟಿ ರೂ ವೆಚ್ಚದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಹಾಗೂ ಕುದುರಗುಂಡ ಯಲಗೊಡ ರಸ್ತೆ ಬರುವಂತ ದಿನಗಳಲ್ಲಿ ಪ್ರತಿ ಗ್ರಾಮ ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬೇಕಾಗುವ ಅನುದಾನವನ್ನು ತಂದು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.ಜೆಡಿಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸಾಯಿಬಣ್ಣ ಬಾಗೇವಾಡಿ ಹಾಗೂ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಹುಯೋಗಿ ತಳ್ಳೊಳ್ಳಿ ಅವರು ಮಾತನಾಡಿ ಶಾಸಕರು ವಿರೋಧ ಪಕ್ಷದಲ್ಲಿ ಇದ್ದರೂ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುತ್ತಿದ್ದಾರೆ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.ಕಾರ್ಯಕ್ರಮದ ಸಾನಿಧ್ಯವನ್ನು ರಾಜಶೇಖರಯ್ಯ ಹಿರೇಮಠ ವಹಿಸಿದ್ದರು, ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಶೇಖರಗೌಡ ಪಾಟೀಲ(ಕೋರವಾರ), ಪ್ರಭುಗೌಡ ಪಾಟೀಲ(ಡಂಬಳ), ಮಶಾಕಸಾಬ ಚೌದರಿ, ಚಂದ್ರಶೇಖರ ಅಸ್ಕಿ, ಬಸಲಿಂಗಪ್ಪ ಜಾಯಿ,ಉಮೇಶ ಇಂಗಳಗಿ, ಸೋಮಶೇಖರ ಹೊಸಮನಿ, ಸಂತೋಷ ಹಚ್ಯಾಳ, ಮಹಾಂತೇಶ ಕೊಕಟನೂರ, ಪರಶುರಾಮ ರಾಠೋಡ ಸೇರಿದಂತೆ ವಂದಾಲ ಹಾಗೂ ಯಲಗೋಡ ಗ್ರಾಮಗಳ ಪ್ರಮುಖರು ಗಣ್ಯರು ಗ್ರಾ.ಪಂ ಸರ್ವ ಸದಸ್ಯರು ಉಪಸ್ಥಿತರಿದ್ದರು. 


ಇತ್ತೀಚಿನ ಸುದ್ದಿ