ನಾಸಿರ್ ಹುಸೇನ್ರಿಂದ ಮಿಲ್ಲತ್ ಶಾಲೆಯಲ್ಲಿ ಧ್ವಜಾರೋಹಣ
ಕೊಪ್ಪಳ 25: ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ವತಿಯಿಂದ ಕೊಪ್ಪಳ ನಗರದ ಬಹದ್ದೂರ್ ಬಂಡಿ ರಸ್ತೆ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿ ನಡೆಯುತ್ತಿರುವ ಮಿಲ್ಲತ್ ಪಬ್ಲಿಕ್ ಶಾಲೆಯಲ್ಲಿ ದಿ 26 ರ ರವಿವಾರ ಬೆಳಿಗ್ಗೆ 8- 15 ಕೆ ಗಣರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಇಲ್ಲಿನ ಸಮಾಜ ಸೇವಕ ವಾಣಿಜ್ಯದ್ಯೆಮಿ ಸೈಯದ್ ನಾಸಿರ್ ಹುಸೇನ್ ರವರು ನೆರವೇರಿಸಲಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೆವಡಿ ತಿಳಿಸಿದ್ದಾರೆ, ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ವಹಿಸಲಿದ್ದಾರೆ ಸಂಸ್ಥೆಯ ಕಾರ್ಯನಿರ್ವಾಹಕ ಸಂಚಾಲಕರಾದ ಅಬ್ದುಲ್ ಅಜೀಜ್ ಮಾನ್ವಿಕರ ಮತ್ತು ಸೈಯದ್ ಇಮಾಮ್ ಹುಸೇನ್ ಸಿಂದೋಗಿ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳೆಲ್ಲರೂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವವರು ಎಂದು ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೆವಡಿ ರವರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.