ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬೀಳಗಿ, 08 : ಆರೋಗ್ಯವು ಮನುಷ್ಯನ ಯೋಗಕ್ಷೇಮದ ಅತ್ಯಂತ ನಿರ್ಣಾಯಕ ಅಂಶಗಳಲ್ಲಿ ಒಂದಾಗಿದೆ. ತಾಂತ್ರಿಕವಾಗಿ, ಆರೋಗ್ಯವಾಗಿರುವುದು ಎಂದರೆ ಯಾವುದೇ ದೈಹಿಕ ಮತ್ತು ಮಾನಸಿಕ ಅಸ್ವಸ್ಥತೆಯಿಂದ ಮುಕ್ತವಾಗಿರುವ ಮತ್ತು ಸದೃಢವಾಗಿರುವ ಸ್ಥಿತಿ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಎಲ್.ಬಿ.ಕುರ್ತಕೋಟಿ ಹೇಳಿದರು.
ಇಲ್ಲಿಯ ಪಟ್ಟಣ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ರಜತ ಮಹೋತ್ಸವ ನಿಮಿತ್ಯ ಎಸ್.ಆರ್.ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಧೇಶಿಸಿ ಅವರು ಮಾತನಾಡಿದರು
ಭಾರತೀಯ ಮಹಿಳೆಯರಲ್ಲಿ ಶೇ.51ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಮತ್ತು ಐದು ವರ್ಷದೊಳಗಿನ ಮಕ್ಕಳಲ್ಲಿ ಶೇ.22ರಷ್ಟು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗದಂತಹ ದೀರ್ಘಕಾಲದ ಕಾಯಿಲೆಗಳು ಹೆಚ್ಚುತ್ತಿವೆ, ವಿವಿಧ ಆಹಾರಗಳನ್ನು ಒಳಗೊಂಡಿರುವ ಸಮತೋಲಿತ ಆಹಾರವು ಅತ್ಯುತ್ತಮ ಆರೋಗ್ಯಕ್ಕೆ ಅತ್ಯಗತ್ಯ. ಇದರ ಜೊತೆಗೆ, ಅರಿಶಿನ ಮತ್ತು ಶುಂಠಿಯಂತಹ ಸಾಂಪ್ರದಾಯಿಕ ಭಾರತೀಯ ಆಹಾರಗಳು ಓಷಧೀಯ ಗುಣಗಳನ್ನು ಹೊಂದಿವೆ. ವಿವಿಧ ಆರೋಗ್ಯ ಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು ಎಂದರು.
ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಸತ್ಯಪ್ಪ ಮೇಲ್ನಾಡ್, ನಿರ್ದೇಶಕರಾದ ಅಮೀನಸಾಬ ಬೀಳಗಿ, ಕೆ.ಎಸ್.ಪತ್ರಿ, ಗಂಗಣ್ಣ ಕೆರೂರು, ಡಾ.ಶೈಲಾ, ಡಾ.ಶಂಕರ್, ಡಾ.ಪ್ರವೀಣ, ಜಿ.ಎಸ್ ಬನ್ಹಟ್ಟಿ, ಶಾಹೀರ್ ಬೀಳಗಿ ಇತರರು ಇದ್ದರು.
.