ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ: ಮತದಾನ ಜಾಗೃತಿ

ಗದಗ 12:  ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ  ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ  ಗದಗ ಜಿಲ್ಲಾ ಸ್ವೀಪ್ ಸಮಿತಿ ವಿವಿಧ ರೀತಿಯ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.  ಇದರ ಅಂಗವಾಗಿ  ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ  ಮತದಾನ ಜಾಗೃತಿ ಮೂಡಿಸಲಾಯಿತು.

      ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಅಮಿಷಕ್ಕೊಳಗಾಗದೇ ತಪ್ಪದೇ ಮತಚಲಾಯಿಸಲು ಪ್ರೇರೆಪಿಸಬೇಕು ಹಾಗೂ  ಧ್ಯೇಯದೊಂದಿಗೆ  ಮತದಾನ ಜಾಗೃತಿಯನ್ನು ಹಮ್ಮಿಕೊಳ್ಳಲಾಗಿದ್ದು. ತಹಶೀಲ್ದಾರ  ವೆಂಕಟೇಶ ನಾಯಕ್ , ಸಿ,ಪಿ.ಐ  ಎಲ್, ಟಿ ಚಂದ್ರಕಾಂತ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.