ಕೊಪ್ಪಳ 26: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಮಾಡುವಂತೆ ಪ್ರೇರೆಪಿಸಲು ಕೊಪ್ಪಳ ವೈದ್ಯಕೀಯ ಕಾಲೇಜಿನಲ್ಲಿ ಓಟರ್ಗ್ರಾಮ್ ಅಳವಡಿಸಿ, ಇವಿಎಂ ಮತದಾನ ಯಂತ್ರ ಮತ್ತು ವಿವಿ ಪ್ಯಾಟ್ ಮತ ಖಾತ್ರಿ ಯಂತ್ರಗಳ ಬಳಕೆ ಕುರಿತಂತೆ ಮಂಗಳವಾರದಂದು ಜಾಗೃತಿ ಮೂಡಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ಹಲವು ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಯುವ ಮತದಾರರನ್ನು ಸೆಳೆಯಲು ಸಾಮಾಜಿಕ ಜಾಲತಾಣದ ಸದುಪಯೋಗ ಪಡೆಯಲು ಮುಂದಾಗಿದ್ದು, "ಓಟರ್ಗ್ರಾಮ್ ಎಂಬ ಸೆಲ್ಫಿ ಫ್ರೇಂ ಅನ್ನು ಬಳಸಿಕೊಂಡು, ಯುವ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಮುಂದಾಗಿದ್ದು, ಓಟರ್ಗ್ರಾಮ್ ಸೆಲ್ಫಿ ಫ್ರೇಂ ಚಟುವಟಿಕೆಗೆ ಇಂದಿನಿಂದ ಚಾಲನೆ ನೀಡಿದೆ. ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಕಿಮ್ಸ್ ನಿದರ್ೆಶಕ ಡಾ. ದತ್ತಾತ್ರೇಯ ಭಂಟ್, ಪ್ರಾಂಶುಪಾಲರಾದ ಡಾ. ವಿಜಯನಾಥ ಇಟಗಿ, ಮುಖ್ಯ ಆಡಳಿತ ಅಧಿಕಾರಿ ಪ್ರಶಾಂತ ಹಾಗೂ ಮತ್ತಿತರರು ಓಟರ್ಗ್ರಾಮ್ ಸ್ಪಾಟ್ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು, ನಾವು ಮತದಾನ ಮಾಡುವೆವು ನೀವು ಸಹ ಮತದಾನ ಮಾಡಿ ಎಂದು ತಮ್ಮ ಕೈಯ ತೋ-ಬೆರಳನ್ನು ತೋರಿಸಿದರು. ಇದರಿಂದ ಉತ್ತೇಜನಗೊಂಡ ಕಿಮ್ಸ್ನ ವೈದ್ಯಕೀಯ ವಿದ್ಯಾಥರ್ಿಗಳು ಕೂಡ, ಮುಗಿಬಿದ್ದು, ಓಟರ್ಗ್ರಾಮ್ ಫ್ರೇಂನಲ್ಲಿ ಫೋಟೋ ತೆಗೆಯಿಸಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಶೇರ್ ಮಾಡಿದರು.
ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರು ಕಿಮ್ಸ್ ಕಾಲೇಜಿನ ವಿದ್ಯಾಥರ್ಿಗಳಿಗೆ ಇವಿಎಂ ಮತದಾನ ಯಂತ್ರ ಹಾಗೂ ವಿವಿ ಪ್ಯಾಟ್ ಮತ ಖಾತ್ರಿ ಯಂತ್ರದ ಬಳಕೆ ಕುರಿತಂತೆ ಪ್ರಾತ್ಯಕ್ಷಿಕೆ ಮೂಲಕ ವಿವರ ನೀಡಿ ಮಾತನಾಡಿ, ನಮ್ಮದು ಸುಭದ್ರವಾದ ದೊಡ್ಡ ದೇಶ ಎಂದು ನಾವು ಹೇಳುತ್ತೇವೆ. ಆದರೆ ಮತದಾನ ಪ್ರಮಾಣ ಮಾತ್ರ ಕಡಿಮೆಯಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ಮತದಾನ ಮಾಡಿ ಮತ್ತು ಮಾಡಿಸಿ. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಲು ಜಿಲ್ಲಾಡಳಿತದಿಂದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳುತ್ತಿದೆ. ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳಲ್ಲಿ ಇಂತಹ ಅರಿವು ಕಾರ್ಯಕ್ರಮಗಳನ್ನು ಜಿಲ್ಲಾ ಸ್ವೀಪ್ ಸಿಮಿತಿಯಿಂದ ಆಯೋಜಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳ ಮೂಲಕವೂ ಸಹ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಪ್ರಜೆಗಳೇ ಪ್ರಭುಗಳು, ಪ್ರಜೆಗಳ ಪ್ರತಿನಿಧಿಗಳನ್ನು ಆರಿಸಿ ಕಳುಹಿಸುವ ಮಹತ್ತರ ಜವಾಬ್ದಾರಿ ಈ ದೇಶದ ಪ್ರತಿಯೊಬ್ಬ ಮತದಾರನ ಮೇಲಿದ್ದು, ಈ ಜವಾಬ್ದಾರಿಯ ಮಹತ್ವವನ್ನು ಅರಿತು, ಎಲ್ಲ ಮತದಾರರು ತಪ್ಪದೆ ತಮ್ಮ ಮತ ಚಲಾಯಿಸಬೇಕು. ಅಲ್ಲದೇ ಮತದಾನ ಮಾಡುವುದರ ಮೂಲಕ ಎಲ್ಲರೂ ತಮ್ಮ-ತಮ್ಮ ಆದ್ಯ ಕರ್ತವ್ಯವನ್ನು ಪಾಲಿಸಿ ಎಂದರು.
ಇದೇ ಮೊದಲ ಬಾರಿಗೆ ಮತ ಚಲಾವಣೆಗೆ ಅರ್ಹಗೊಂಡಿರುವ ನೂತನ ಮತದಾರರು ಇವಿಎಂ ಹಾಗೂ ವಿವಿಪ್ಯಾಟ್ ಕಾರ್ಯ ಚಟುವಟಿಕೆ ಕುರಿತು ಅಣಕು ಮತದಾನ ಮಾಡುವ ಮೂಲಕ ಅನುಭವ ಹಂಚಿಕೊಂಡು, ನಾವು ಮತದಾನ ಮಾಡುವೆವು ಹಾಗೂ ನಮ್ಮ ಸುತ್ತಮುತ್ತಲಿನವರಿಗೂ ಸಹ ಕಡ್ಡಾಯವಾಗಿ ಮತದಾತ ಮಾಡುವಂತೆ ಪ್ರೋತ್ಸಾಹಿಸುತ್ತೇವೆ ಎಂದು ಹೇಳಿಕೊಂಡರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿ ಅವರು ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಕಿಮ್ಸ್ ಕಾಲೇಜಿನ ಸಹಾಯಕ ಉಪನ್ಯಾಸಕ ಮಂಜುನಾಥ, ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಟಿ. ಕೃಷ್ಣ ಮೂತರ್ಿ ಸೇರಿದಂತೆ ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿ, ಸಿಬ್ಬಂದಿಗಳು ಮತ್ತು ಕಾಲೇಜಿನ ಎಲ್ಲಾ ವಿದ್ಯಾಥರ್ಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.