ಯಲಬುರ್ಗಾ ಹೋಬಳಿ ಕಸಾಪ ಘಟಕದ ಅಧ್ಯಕ್ಷರಾಗಿ ಮಹಾಂತೇಶ ಛಲವಾದಿ ನೇಮಕ
ಯಲಬುರ್ಗಾ 09: ಯಲಬುರ್ಗಾ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಮಹಾಂತೇಶ ಛಲವಾದಿ ಅವರನ್ನು ನೇಮಕ ಮಾಡಿದ್ದಾರೆ. ಕಸಾಪ ತಾಲೂಕಾಧ್ಯಕ್ಷ ಬಾಲದಂಡಪ್ಪ ತಳವಾರ ಅವರು ಮಹಾಂತೇಶ ಛಲವಾದಿ ಅವರಿಗೆ ಆದೇಶ ಪ್ರತಿಯನ್ನು ನೀಡಿ ನೇಮಕಗೊಳಿಸಲಾಗಿದೆ ಎಂದು ತಿಳಿಸಿದರು. ಕಸಾಪ ಸಂಘಟನೆಗೆ ಆದ್ಯತೆ: ನನ್ನನ್ನು ಹೋಬಳಿ ಘಟಕದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.
ಕಸಾಪ ಸಂಘಟನೆಯ ಮೂಲಕ ಕನ್ನಡದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನನಗೆ ಸಿಕ್ಕರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಎಲ್ಲರ ವಿಶ್ವಾಸ ಪಡೆದು ಕ್ರಿಯಾಶೀಲವಾಗಿ ಕೆಲಸವನ್ನು ಮಾಡುತ್ತೇನೆ ಎಂದು ನೂತನ ಕಸಾಪ ಹೋಬಳಿ ಘಟಕದ ನೂತನ ಅಧ್ಯಕ್ಷ ಮಹಾಂತೇಶ ಛಲವಾದಿ ಹೇಳಿದರು.
ಈ ವೇಳೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ವೀರಣ್ಣ ನಿಂಗೋಜಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಮೂರ್ತಿ ಇಟಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಸ್.ವ್ಹಿ ಧರಣಾ, ಕಸಾಪ ಗೌರವ ಕಾರ್ಯದರ್ಶಿ ಶೇಖರ ಗುರಾಣಿ, ಎನ್.ಜಿ.ಓ ನಿರ್ದೇಶಕ ಮೆಹಬೂಬ ಬಾದಷಹ ಇದ್ದರು.