ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ 02 : ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಜನವರಿ 3 ಮತ್ತು 4 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಜ. 3 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, ಕೊಪ್ಪಳ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಪರೀವೀಕ್ಷಣೆ ಮಾಡುವರು. ನಂತರ 10.30ಕ್ಕೆ ನಾರಾಯಣಪೇಟೆಯಲ್ಲಿ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಯೋಜನೆಯ ಮೊದಲನೇ ಹಂತದ ಕಾಮಗಾರಿಯ ಜಾಕ್ವೆಲ್ ್ಘ ಪಂಪ್ ಹೌಸ್ ಪರೀವೀಕ್ಷಣೆ ನಡೆಸುವರು. 11 ಗಂಟೆಗೆ ಶಿವಪುರ-ಹುಲಿಗಿ ಗ್ರಾಮದ ಹತ್ತಿರ ಕೊಪ್ಪಳ ಹಿರೇಹಳ್ಳ ಏತ ನೀರಾವರಿ ಯೋಜನೆ ಹಾಗೂ ಕೆರೆ ತುಂಬಿಸುವ ಕಾಮಗಾರಿಯ ಜಾಕ್ವೆಲ್ ್ಘ ಪಂಪ್ ಹೌಸ್ ಪರೀವೀಕ್ಷಣೆ ಮಾಡುವರು. ಮಧ್ಯಾಹ್ನ 12 ಗಂಟೆಗೆ ಬಾಣಾಪುರದಲ್ಲಿ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿಯ ಜಾಕ್ವೆಲ್ ್ಘ ಪಂಪ್ ಹೌಸ್ ಪರೀವೀಕ್ಷಣೆ ನಡೆಸುವರು. ಮಧ್ಯಾಹ್ನ 3.30ಕ್ಕೆ ಕಡೆಕೊಪ್ಪ ಗ್ರಾಮದಲ್ಲಿ ಕುಷ್ಟಗಿ ಏತ ನೀರಾವರಿ ಯೋಜನೆ ಹಾಗೂ ಕೆರೆ ತುಂಬಿಸುವ ಕಾಮಗಾರಿಯ 2ನೇ ಹಂತದ ಜಾಕ್ವೆಲ್ ್ಘ ಪಂಪ್ ಹೌಸ್ ಪರೀವೀಕ್ಷಣೆ ಮಾಡಿದ ಬಳಿಕ ಸಂಜೆ 5 ಗಂಟೆಗೆ ಅಲ್ಲಿಂದ ನಿರ್ಗಮಿಸಿ, ಹೊಸಪೇಟೆಯ ವೈಕುಂಠ ಅತಿಥಿ ಗೃಹಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.
ಜನವರಿ 4ರಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಕೊಪ್ಪಳ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ನಂತರ 10.30ಕ್ಕೆ ಸಣ್ಣ ನೀರಾವರಿ ಇಲಾಖೆಯ ಕೊಪ್ಪಳ ವಿಭಾಗದ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಛೇರಿಗೆ ಭೇಟಿ ನೀಡುವರು. ನಂತರ ಅಂದು ಸಂಜೆ 4 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೊಪ್ಪಳ 02 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
30 ದಿನಗಳ ಮೊಬೈಲ್ ದುರಸ್ತಿ ಮತ್ತು ಸರ್ವೀಸಿಂಗ್ ಹಾಗೂ ಮೋಟಾರ್ ರೀವೈಂಡಿಗ್ ಮತ್ತು ಪಂಪಸೆಟ್ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.
ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಮೊ.ಸಂ: 9483618178, 9481085217, 7259073827, 9538096796 ಗೆ ಸಂಪರ್ಕಿಸಬಹುದಾಗಿದೆ.
ಸ್ವಯಂ ಉದ್ಯೋಗ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಜನವರಿ 11 ರಂದು ಸಂದರ್ಶನ ನಡೆಯಲಿದ್ದು, ಜ. 13 ರಿಂದ ತರಬೇತಿ ಪ್ರಾರಂಭವಾಗಲಿವೆ ಎಂದು ಕೊಪ್ಪಳ ಎಸ್ಬಿಐ ಆರ್ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಕೊಪ್ಪಳ 02 : ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗಾಗಿ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ. ಗಳಿಗಿಂತ ಮೀರಿರಬಾರದು. ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1.00 ಲಕ್ಷ ರೂ.ಗಳಿಗಿಂತ ಮೀರಿರಬಾರದು, ಪರಿಶಿಷ್ಟ ಜಾತಿ ್ಘ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಕಾಲೇಜಿನ ಪ್ರವೇಶ ಶುಲ್ಕದ ಪ್ರತಿ ಪಡೆದಿರಬೇಕು.
ನಿಗದಿತ ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್, ಅಂಕಪಟ್ಟಿ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಕೊಪ್ಪಳ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು/ ಪೋಷಕರು ವೆಬ್ಸೈಟ್ ಣಣಠಿ:/ಠಿ.ಞಚಿಡಿಟಿಚಿಣಚಿಞಚಿ.ರಠ.ಟಿ/ ಮೂಲಕ ಜನವರಿ 10ರ ಒಳಗಾಗಿ ಆಲ್ಲೈನ್ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನ ಅಜಾದ್ ಭವನ ಕೊಪ್ಪಳ, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಯಲಬುರ್ಗಾ, ಕುಷ್ಟಗಿ ಹಾಗೂ ಗಂಗಾವತಿ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಹತ್ತಿರ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸುವಂತೆ ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ ್ಘ ಕುಷ್ಟಗಿ: ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಕೊಪ್ಪಳ 02 : 2024-25ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದ್ದು, ಮೆಟ್ರಿಕ್ ನಂತರದ ತರಗತಿಗಳಾದ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ಅಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್ಸೈಟ್ ಣಣಠಿ:/ಠಿ.ಞಚಿಡಿಟಿಚಿಣಚಿಞಚಿ.ರಠ.ಟಿ/ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನ ಅಜಾದ್ ಭವನ ಕೊಪ್ಪಳ, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕುಷ್ಟಗಿ ಹಾಗೂ ಹತ್ತಿರ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸುವಂತೆ ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.