ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದ ಯೋಜನಾ ನಿರ್ದೇಶಕ ರವಿ ಬಂಗಾರ್ಪ
ರಾಯಬಾಗ, 04 : ತಾಲೂಕಿನ ವಿವಿಧ ಗ್ರಾ.ಪಂಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿದ್ದ ವಿವಿಧ ಕಾಮಗಾರಿಗಳನ್ನು ಜಿ.ಪಂ ಯೋಜನಾ ನಿರ್ದೇಶಕ ರವಿ ಬಂಗಾರ್ಪ ಅವರು ಮಂಗಳವಾರ ಪರೀಶೀಲಿಸಿದರು. ತಾಲೂಕಿನ ನಸಲಾಪೂರ, ಮೇಖಳಿ, ನಂದಿಕುರಳಿ ಗ್ರಾಪಂಯಲ್ಲಿನ ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿ, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಲಮಿತಿಯಲ್ಲಿ ಎಲ್ಲ ನರೇಗಾ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಕಾಮಗಾರಿಗಳ ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಕೂಲಿಕಾರರ ಸಮಸ್ಯೆ ಆಲಿಸಿದರು. ಬಳಿಕ ಕೂಲಿಕಾರರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಕದ್ದು, ತಾಂತ್ರಿಕ ಸಂಯೋಜಕ ಅಶೋಕ ಪೂಜಾರಿ, ಐಇಸಿ ಸಂಯೋಜಕ ಮುತ್ತುರಾಜ್ ಗದಾಡಿ ಹಾಗೂ ಗ್ರಾ.ಪಂ ಸಿಬ್ಬಂದಿ ಮತ್ತು ನರೇಗಾ ಕೂಲಿಕಾರರು ಇದ್ದರು.