ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ
ಕೊಪ್ಪಳ 24: ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯ ನಿರ್ವಹಣಾ ಮಂಡಳಿ ಸದಸ್ಯರಾಗಿ ನೇಮಕಗೊಂಡ ಮಹಾಂತೇಶಗೌಡ ಪಾಟೀಲ್ ಅವರನ್ನು ಮಾಜಿ ಸಂಸದ ಸಂಗಣ್ಣ ಕರಡಿಯವರು ತಮ್ಮ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗವಿಸಿದ್ದಪ್ಪ ಕರಡಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಕುಮಾರ್ ಪಟ್ಟಣಶೆಟ್ಟಿ, ಪ್ರವೀಣ್ ಕುಮಾರ್ ಉಳ್ಳಾಗಡ್ಡಿ, ವೀರಯ್ಯಸ್ವಾಮಿ ಬೊಮ್ಮನಾಳ ಉಪಸ್ಥಿತರಿದ್ದರು.