ಸಚಿನ್ ಸಾವು ಪ್ರಕರಣ ನ್ಯಾಯಾಂಗ ತನಿಖೆ ನಡೆಸಿ ಜಿಲ್ಲಾ ವಿಶ್ವಕರ್ಮ ಸಮಾಜದಿಂದ ಪ್ರತಿಭಟನಾ ಮೆರವಣಿಗೆ
ಕೊಪ್ಪಳ 07 : ಕಲಬುರಗಿ ಗುತ್ತಿಗೆದಾರ ಸಚಿತ್ ಪಂಚಾಳ ಅವರ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ವಿಶ್ವಕರ್ಮ ಸಮಾಜದಿಂದ ನಗರದ ಅಶೋಕ ವೃತ್ತದಿಂದ ಡಿಸಿ ಕಚೇರಿಯ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಕಲಬುರಗಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಸಾವಿನ ಪ್ರಕರಣ ನಿಜಕ್ಕೂ ಸಮಾಜಕ್ಕೆ ನೋವು ತರುವಂತಾಗಿದೆ. ಇಂದು ಯುವಕರು ರಾಜಕಾರಣಕ್ಕೆ ಹಾಗೂ ಉದ್ಯಮಕ್ಕೆ ಬರುವುದು ಕಷ್ಟದ ಕೆಲಸವಾಗುತ್ತಿದೆ. ಸಚಿನ್ ಅವರು ಗುತ್ತಿಗೆದಾರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ರಾಜಕಾರಣದ ಒತ್ತಡ ಸೇರಿದಂತೆ ನಾನಾ ಕಾರಣಗಳಿಂದ ಮಾನಸಿಕ ತೊಂದರೆಯನ್ನ ಅನುಭವಿಸಿದ್ದಾರೆ. ಇಂತಹ ವ್ಯವಸ್ಥೆಯಿಂದಾಗಿ ಅವರ ಸಾವು ಸಂಭವಿಸಿದೆ. ಇದರಿಂದ ಮೃತ ಗುತ್ತಿಗೆದಾರನ ಕುಟುಂಬವು ತುಂಬ ದುಃಖದಲ್ಲಿ ಮುಳುಗಿದೆ. ಕೂಡಲೇ ಸರ್ಕಾರವು ಅವರಿಗೆ ಸಾಂತ್ವಾನ ಹೇಳಿ ಪರಿಹಾರ ಕೊಡುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು. ರಾಜಕೀಯ ಒತ್ತಡ, ದಬ್ಬಾಳಿಕೆ, ದೌರ್ಜನ್ಯಗಳು ನಿಲ್ಲಬೇಕಿದೆ. ಇಂದು ಯುವ ಸಮೂಹ ಗುತ್ತಿಗೆದಾರರ ಕೆಲಸ ಮಾಡಲು ಹೆದರುವಂತ ಪರಿಸ್ಥಿತಿ ಉಲ್ಭಣಿಸಿದೆ. ಸಚಿನ್ ಅವರು ಇಡೀ ಕುಟುಂಬಕ್ಕೆ ಆಸರೆಯಾಗಿದ್ದರು. ಅವರ ಆತ್ಮಹತ್ಯೆ ಮುನ್ನಾ ಡೆತ್ನೋಟ್ ಬರೆದಿಟ್ಟಿದ್ದಾನೆ. ಇದನ್ನು ತನಿಖೆ ಮಾಡಬೇಕು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿದರೆ ಎಲ್ಲವೂ ಬೆಳಕಿಗೆ ಬರಲಿದೆ. ಆತನ ಸಾವಿಗೆ ಕಾರಣರಾದ ಎಲ್ಲರನ್ನು ಬಂಧಿಸಬೇಕು. ತಕ್ಷಣ ಮೃತ ಗುತ್ತಿಗೆದಾರನ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಆ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದರು. ಗುತ್ತಿಗೆದಾರರಿಗೆ ಆಗುತ್ತಿರುವ ಕಿರುಕುಳ ತಡೆಗೆ ದೌರ್ಜನ್ಯ ಹಾಗೂ ಶೋಷಣೆ ತಡೆಗೆ ಸರ್ಕಾರವು ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕ ಸೇರಿ ವಿವಿಧ ಘಟಕಗಳಿಂದ ನಗರದ ಅಶೋಕ ವೃತ್ತದಿಂದ ಡಿಸಿ ಕಚೇರಿಯ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿತು. ಡಿಸಿ ಕಚೇರಿ ಮುಂದೆ ಅರ್ಧ ಗಂಟೆಗೂ ಹೆಚ್ಚುಕಾಲ ಪ್ರತಿಭಟನೆ ನಡೆಸಿ ಎಸಿ ಕ್ಯಾ.ಮಹೇಶ ಮಾಲಗಿತ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಪ್ರತಿಭಟನೆಯಲ್ಲಿ ಲೇಬಗೇರಿಯ ನಾಗಮೂರ್ತೇಂದ್ರ ಮಹಾ ಸ್ವಾಮಿಗಳು, ನಾಗಲಿಂಗ ಮಹಾ ಸ್ವಾಮಿಗಳು, ಸಿರಸಪ್ಪಯ್ಯ ಸ್ವಾಮಿಗಳು, ಮುದ್ದಾಬಳ್ಳಿಯ ಗುರುನಾಥ ಸ್ವಾಮಿಗಳು, ಗಿಣಗೇರಿಯ ಶ್ರೀಕಂಠ ಸ್ವಾಮಿಗಳು ನೇತೃತ್ವದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶ ಕುಮಾರ ಕಮ್ಸಾಳ, ಜಿಲ್ಲಾ ಗೌರವಾಧ್ಯಕ್ಷ ಈಶಪ್ಪ ಬಡಿಗೇರ, ಜಿಲ್ಲಾ ಕಾರ್ಯಾಧ್ಯಕ್ಷ ರುದ್ರ್ಪ ಬಡಿಗೇರ, ವಿವಿಧ ತಾಲೂಕು ಅಧ್ಯಕ್ಷರುಗಳಾದ ದೇವೇಂದ್ರ್ಪ ಬಡಿಗೇರ, ಶಂಕ್ರ್ಪ ಬಡಿಗೇರ, ಕಾಳೇಶ ಬಡಿಗೇರ, ದೇವಪ್ಪ ಬಡಿಗೇರ, ಸೂಗೂರೇಶ್ವರ ಅಕ್ಕಸಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಪ್ರಕಾಶ, ಸಮಾಜದ ಮುಖಂಡರಾದ ಪ್ರಭಾಕರ ಬಡಿಗೇರ, ಕಲ್ಲೇಶ ಬಡಿಗೇರ, ದೇವೇಂದ್ರ್ಪ ರಾಜೂರು, ಕೃಷ್ಣಾ ಬಡಿಗೇರ, ಮೌನೇಶ ಮಾದಿನೂರು, ಶರಣಪ್ಪ ಬಡಿಗೇರ, ವೀರಭದ್ರ್ಪ ಬಡಿಗೇರ, ಮಂಜುನಾಥ ಬಡಿಗೇರ, ಮೌನೇಶ ಕಿನ್ನಾಳ, ಬ್ರಹ್ಮಾನಂದ ಬಡಿಗೇರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.