ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಕರಾಟೆ ಸ್ಪರ್ಧೆಗೆ ಆಯ್ಕೆ
ಕೊಪ್ಪಳ 05: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಕರಾಟೆ ಪಂದ್ಯಾಟಗಳು ದಿನಾಂಕ 06 ರಿಂದ 08 ರವರೆಗೆ ಬಿ.ಎಸ್.ಅಬ್ದುಲ್ ರೆಹಮಾನ್ ವಿಶ್ವವಿದ್ಯಾಲಯ, ಭೂಪಾಲ್ದಲ್ಲಿ ಜರುಗಲಿದೆ. ಸದರಿ ಪಂದ್ಯಾಟಕ್ಕೆ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ ಕು. ನೇತ್ರಾ ಇವರು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ತಂಡದ ಆಟಗಾರರಾಗಿ ಆಯ್ಕೆಯಾಗಿರುತ್ತಾರೆ. ಸದರಿ ವಿದ್ಯಾರ್ಥಿನಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ. ಆರ್ ಮರೇಗೌಡ ಮತ್ತು ಗವಿಸಿದ್ಧೇಶ್ವರ ಟ್ರಸ್ಟಿನ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರಾದ ಡಾ. ಚನ್ನಬಸವ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ವಿನೋದ ಸಿ. ಮುದಿನಬಸನಗೌಡರ ಹಾಗೂ ಕಾಲೇಜಿನ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.