ಇಂದು ಶ್ರೀ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆ ಪೂಜೆ
ಕೊಪ್ಪಳ 29: ಜಿಲ್ಲೆಯ ಕುಕನೂರು ತಾಲೂಕಿನ ಐತಿಹಾಸಿಕ ಪ್ರಸಿದ್ಧ ಇಟ್ಟಗಿ ಗ್ರಾಮದ ಹೊರವಲಯ ನಾಗದೇವರು ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ ತಾರೀಖು 30ನೇ ಡಿಸೆಂಬರ್ 2024ರ ಸೋಮವಾರ ಎಳ್ಳು (ಪುಷ್ಯ) ಅಮಾವಾಸ್ಯೆ ಪೂಜೆ ಬೆಳಿಗ್ಗೆ 11 ರಿಂದ 4 ರವರೆಗೆ ಪೂಜೆ ಕ್ರೋಧಿ ನಾಮ ಸಂವತ್ಸರ, ಮಾರ್ಗಶಿರ ಮಾಸೆ ಹೇಮಂತ ಋತು, ದಕ್ಷಿಣಾಯಣ ಕೃಷ್ಣ ಪಕ್ಷ, ದಿ30- ಸೋಮವಾರದಂದು “ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ನಾಗದೇವರು ನಾಗಚೌಡೇಶ್ವರಿ ಅಮ್ಮನವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಎಂದು ಕ್ಷೇತ್ರ ಉಸ್ತುವಾರಿ ರಮೇಶ ಸುರ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂಜೆ, ಸೇವೆ ಮತ್ತು ಅಭಿವೃದ್ಧಿಗಾಗಿ ದಾನಿಗಳು, ನೋಂದಾಯಿಸಿಕೊಳ್ಳುವವರು ಮತ್ತು ಹೆಚ್ಚಿನ ಮಾಹಿತಿಗಾಗಿ : ರಮೇಶ ಸುರ್ವೆ ಸಂಚಾಲಕರು, ನಾಗದೇವರು ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿ, ನಂ. 468, 13ನೇ ಮುಖ್ಯರಸ್ತೆ, 3ನೇ ಹಂತ, ಮೋದಿ ಸರ್ಕಲ್-ತಿಮ್ಮಯ್ಯ ರಸ್ತೆ, ಮಂಜುನಾಥನಗರ, ಬೆಂಗಳೂರು-560010. ಮೊಬೈಲ್ : 9845307327 ನಂಬರ್ಗೆ ಸಂಪರ್ಕಿಸಬಹುದು.
ವಿಶೇಷ ಸೂಚನೆ : ಪ್ರತಿ ತಿಂಗಳ ಅಮಾವಾಸ್ಯೆಯ ದಿನ ಮಾತ್ರ, ದೇವರ ದರ್ಶನ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ. ಉಳಿದ ದಿನಗಳಲ್ಲಿ ಹೊರಗಿನಿಂದಲೇ ದರ್ಶನ ಮತ್ತು ಪೂಜೆ ಮಾಡಿಕೊಳ್ಳಬೇಕೆಂದು ವಿನಂತಿಸುತ್ತೇನೆ. ಕಡ್ಡಾಯವಾಗಿ ಒಳಗಡೆ ಕಟ್ಟೆ ಹತ್ತಿ ಹೋಗಬಾರದೆಂದು ಮನವಿ ಮಾಡುತ್ತೇನೆ. (ಕೆಲವರು ಮಕ್ಕಳನ್ನು ಒಳಗೆ ಕಳುಹಿಸಿ ಪೂಜೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ದಯಮಾಡಿ ಹಾಗೆ ಮಾಡದೆ ಹೊರಗಿನಿಂದಲೇ ಪೂಜೆ ಮಾಡಿ ನಮಸ್ಕರಿಸಿ) ಅಮಾವಾಸ್ಯೆ ದಿನ ಮಾತ್ರ ವಿಶೇಷ ದರ್ಶನ ನೀಡುವ ಕ್ಷೇತ್ರ, ನಡೆದುಕೊಳ್ಳುವವರು ಸಂಕಲ್ಪ ಮಾಡಿ 5 ಅಮಾವಾಸ್ಯೆ ಪೂಜೆ ಪೂರೈಸಬೇಕು.ವಿಶೇಷವಾಗಿ : ಈ ಭಾರಿ ಇಟಗಿಯಲ್ಲಿರುವ ದೇವಾಲಯ ಚಕ್ರವರ್ತಿ ಮಹದೇವ ದೇಗುಲದ “ಮಹೇಶ್ವರ ಜಾತ್ರೆ” ನಡೆಯಲಿದೆ, ದಿ 30- ಸಂಜೆ 4.30ಕ್ಕೆ ಮಹಾರಥೋತ್ಸವ ನಡೆಯಲಿದ್ದು, ಭಕ್ತಾದಿಗಳು ದೇವರ ದರ್ಶನ ಮತ್ತು ಶಿಲ್ಪ ವೈಭವನ್ನು ಕಣ್ತುಂಬಿಕೊಳ್ಳಿ, ಕುಟುಂಬ ಸಮೇತ ಬನ್ನಿ ಎಂದು ಸಂಘಟಕ ಮತ್ತು ಕ್ಷೇತ್ರ ಉಸ್ತುವಾರಿ ರಮೇಶ್ ಸುರ್ವೇ ಸರ್ವರನ್ನು ಸ್ವಾಗತಿಸಿದ್ದಾರೆ.