ಉತ್ತಮ ಆಡಳಿತ ಮತ್ತು ಸೇವೆಗಾಗಿ ಅಮ್ಜದ್ ಪಟೇಲ್ ಗೆ ಸೇವಾ ರತ್ನ ರಾಜ್ಯ ಪ್ರಶಸ್ತಿ
ಕೊಪ್ಪಳ 17: ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ನೂತನ ರಾಷ್ಟ್ರೀಯ ಮಟ್ಟದ ಸಂಘಟನೆಯ ಉದ್ಘಾಟನೆ ಹಾಗೂ ವಿಶ್ವ ರೈತ ದಿನಾಚರಣೆ ಮತ್ತು ರಾಜ್ಯ ರೈತರ ಮಹಾ ಸಮಾವೇಶದಲ್ಲಿ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರ ಉತ್ತಮ ಆಡಳಿತ ಮತ್ತು ಜನಪರ ಸೇವೆಯನ್ನು ಪರಿಗಣಿಸಿ ಅವರಿಗೆ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಲು ಸಂಘಟಕರು ನಿರ್ಧರಿಸಿ ಘೋಷಿಸಿದ್ದಾರೆ.
ಇದೇ ತಿಂಗಳ 21ರಂದು ಮಂಗಳವಾರ ಬೆಳಿಗ್ಗೆ ಜಿಲ್ಲೆಯ ಕುಕನೂರು ಪಟ್ಟಣದ ಮುಂಡರಗಿ ಅನ್ನದಾನಿಶ್ವರ ಶಾಖಾ ಮಠ ದಲ್ಲಿ ಅಮ್ಜದ್ ಪಟೇಲ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸತ್ಕರಿಸಲಾಗುವುದು ಎಂದು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಎಂ ಎನ್ ಕುಕನೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಇದೇ ಸಂದರ್ಭದಲ್ಲಿ ಮಠದ ಪೀಠಾಧಿಪತಿಗಳಾದ ಡಾ, ಮಹಾದೇವ ಮಹಾಸ್ವಾಮಿಗಳವರ ದ್ವಿತೀಯ ವರ್ಷದ ಪಟ್ಟಾಧಿಕಾರ ಮಹೋತ್ಸವವು ಕೂಡ ಜರುಗಲಿದೆ ಹಾಗೂ ತರಬೇತಿ ಪಡೆದ ರೈತ ಮಹಿಳೆಯರಿಗೆ ಉಚಿತ ಕಂಪ್ಯೂಟರ್ ಹಾಗೂ ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ನೀಡಲಾಗುವುದು ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು ಸಂಸದರು ಶಾಸಕರು ಸೇರಿದಂತೆ ಇತರ ಜನಪ್ರತಿನಿಧಿಗಳು ಪಾಲ್ಗೊಳ್ಳುವವರು ಅಲ್ಲದೇ ವಿವಿಧ ಮಠದ ಶ್ರೀಗಳು ಸಮಾರಂಭದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಲಿದ್ದಾರೆ ಎಂದು ಕಾರ್ಯಕ್ರಮ ಸಂಘಟಕ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಎಂ ಎನ್ ಕುಕನೂರ್ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಘಟನೆ ಹಾಗೂ ಸಂಘದ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಮಹಬೂಬ್ ಮಾಳೆಕೋಪ್, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ್ ಅಡವಿ ಸದಸ್ಯರಾದ ಚಂದ್ರಕಾಂತ್ ಗುಡಿಮನಿ ಜಿಲ್ಲಾ ಕಾರ್ಯದರ್ಶಿ ಹನುಮೇಶ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಪಿಡನ ಗೌಡ್ರು ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದು, ಅಮ್ಜದ್ ಪಟೇಲ್ ರವರಿಗೆ ಪ್ರಶಸ್ತಿ ಲಭಿಸಿರೋದಕ್ಕೆ ಅವರ ಅಭಿಮಾನಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.