ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ

Shifting stray cattle to Goshala

ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ 

ಗದಗ  25: ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಹೆಚ್ಚಾಗಿರುವ ಕುರಿತು ದೂರುಗಳು ನಗರಸಭೆಗೆ ಸ್ವೀಕೃತವಾಗಿದ್ದು ಹಾಗೂ ಸಾರ್ವಜನಿಕರಿಗೆ ಬೀದಿ ದನಗಳ ಹಾವಳಿಯಿಂದ ತೊಂದರೆಉಂಟಾಗಿರುವ ಘಟನೆಗಳನ್ನ ಆಧರಿಸಿ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲಿಕ್ಕೆ ನಿರ್ಣಯಿಸಲಾಗಿದೆ. ಇಲ್ಲಿಯವರೆಗೂ ಬೆಟಗೇರಿ ಭಾಗದ ಮಾರುಕಟ್ಟೆ ಪ್ರದೇಶದಲ್ಲಿ ಬೀದಿ ದನಗಳ ಹಿಡಿಯುವ ಕಾರ್ಯಚರಣೆ ನಡೆಸಿ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರಕ್ಕೆ ಒಟ್ಟು 80 ಬೀದಿ ದನಗಳನ್ನು ಹಿಡಿದು ಗೋಶಾಲೆಗಳಿಗೆ ರವಾನಿಸಲಾಗಿರುತ್ತದೆ.  ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಸಭೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದಯ ಬದಿ, ಬೆಟಗೇರಿ ಪೋಲಿಸ್ ಠಾಣೆ ಉಪ ನೀರೀಕ್ಷಕ ಲಕ್ಷ್ಮಣ,  ಹಿರಿಯಆರೋಗ್ಯ ನೀರೀಕ್ಷಕ ಎಂ.ಎಂ ಮಕಾಂದರ ಹಾಗೂ ನಗರಸಭೆಯ ಸಿಬ್ಬಂದಿಗಳಾದ ಕೆಂಚಪ್ಪ ಪೂಜಾರ, ವಾಸು ಹಾದಿಮನಿ ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಪಾಲ್ಗೊಂಡಿದ್ದರು.