ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿರಾಜ್ ಬಿಸರಳ್ಳಿ ಹಾಗೂ ಅಖಿಲ್ ಉಡೇವುರಿಗೆ ಸನ್ಮಾನ
ಕೊಪ್ಪಳ 05: ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಕರಡಿ ಸಂಗಣ್ಣ ನವರು 2023 ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಮಾಧ್ಯಮ ಅಕಾಡೆಮಿಯ ದತ್ತಿ ಪ್ರಶಸ್ತಿ ಪುರಸ್ಕೃತ ಯುವ ಪತ್ರಕರ್ತ ಮಹಮ್ಮದ್ ಅಖೀಲ್ ಉಡೇವು ಅವರಿಗೆ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗೂಳಪ್ಪ ಹಲಗೇರಿ, ನಗರಸಭೆ ಸದಸ್ಯರಾದ ರಾಜಶೇಖರ್ ಅಡೂರ್, ಅಜೀಮ್ ಅತ್ತಾರ್, ಅರುಣ್ ಅಪ್ಪು ಶೆಟ್ಟಿ , ಮುಖಂಡರಾದ ಶರಣಪ್ಪ ಸಜ್ಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.