17 ಸಾಯಂಕಾಲ 6:00ಗೆ ಸಮಾರೋಪ ಸಮಾರಂಭ ಕಾರ್ಯಕ್ರಮ

17 Closing ceremony at 6:00 pm

17 ಸಾಯಂಕಾಲ 6:00ಗೆ ಸಮಾರೋಪ ಸಮಾರಂಭ ಕಾರ್ಯಕ್ರಮ 

ಕೊಪ್ಪಳ 16: ಕಾರ್ಯಕ್ರಮದ ಸಾನಿಧ್ಯವನ್ನು ಹೆಬ್ಬಾಳದ ಬೃಹನ್ಮಠದ ಶ್ರೀ ಷ.ಬ್ರ. ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಶಿರೂರು ಮಹಾಂತತೀರ್ಥಯೋಗ ಮತ್ತು ನಿಸರ್ಗಚಿಕಿತ್ಸಾಕೇಂದ್ರದ ಪೂಜ್ಯ ಡಾಕ್ಟರ ಬಸವಲಿಂಗ ಮಹಾಸ್ವಾಮಿಗಳು ವಹಿಸಿಕೊಳ್ಳುವರು. ಬೆಂಗಳೂರಿನ ಉಚ್ಚ ನ್ಯಾಯಾಲಯದಗೌರವಾನ್ವಿತ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ್‌ರವರು ಸಮಾರೋಪ ನುಡಿಯನ್ನು ನುಡಿಯಲಿದ್ದಾರೆ. 

ನಂತರ ಜೀಕನ್ನಡ ಖ್ಯಾತಿಯ ಶುಭರಾಘವೇಂದ್ರ ಮೈಸೂರು ಹಾಗೂ ತಂಡದವರಿಂದ ಮತ್ತು ಸಹಗಾಯನಕಾರ್ಯಕ್ರಮ ವೆ.ಚಿ.ಅರುಣ್‌ಕುಮಾರ್ ಬೆಂಗಳೂರು ಇವರಿಂದ ಮತ್ತು ಕಲರ್ಸ್‌ ಕನ್ನಡ ಎದೆ ತುಂಬಿ ಹಾಡುವೆನು ಖ್ಯಾತಿಯ ಬೆಂಗಳೂರಿನ ಸೂರ್ಯಕಾಂತ್ ಗಡಿನಿಂಗದಹಳ್ಳಿ ಇವರಿಂದ ಸುಗಮ ಸಂಗೀತಕಾರ್ಯಕ್ರಮಜರುಗಲಿದೆ ನಂತರದಲ್ಲಿ ಗಂಗಾವತಿಯ ಬಿ.ಪ್ರಾಣೇಶ್ ಇವರಿಂದ ಹಾಸ್ಯೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.