ಗೀತೆ ಸ್ಪರ್ಧೆಯಲ್ಲಿ ಅದ್ವೀತಾ ಪ್ರಥಮ ಸ್ಥಾನ

ಲೋಕದರ್ಶನ ವರದಿ

ಶಿಗ್ಗಾವಿ : ತಾಲೂಕಿನ ಬನ್ನೂರ ಗ್ರಾಮದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನಡೆದ ಧರ್ಮಸಭೆಯ ಪುರಾಣ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯ 1 ರಿಂದ 4 ನೇ ತರಗತಿಯ ಅಭಿನಯ ಗೀತೆ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದ ಅದ್ವೀತಾ ಹುಡೆದಗೌಡ್ರ ಇವಳನ್ನು ಭಾರತ ಸೇವಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ದಿಂಗಾಲೇಶ್ವರ ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ತಾಪಂ ಸದಸ್ಯ ಶ್ರೀಕಾಂತ ಪೂಜಾರ, ಗುತ್ತಿಗೆದಾರರಾದ ಕಿರಣ ಅವರಾದಿ, ಮಂಜುನಾಥ ದುಬೈ, ನೌಕರ ಸಂಘದ ಅಧ್ಯಕ್ಷ ಅರುಣ ಹುಡೆದಗೌಡ್ರ, ಮುಖಂಡರಾದ ವೀರಭದ್ರಪ್ಪ ಅಗಡಿ, ರೇವಣಸಿದ್ದಯ್ಯ ಹಿರೇಮಠ, ಬ್ರಹ್ಮಾನಂದ ಬಡಿಗೇರ ಇದ್ದರು.


ಇತ್ತೀಚಿನ ಸುದ್ದಿ