ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜನಜಾಗೃತಿ ಅವಶ್ಯಕ: ಜಿಲ್ಲಾಧಿಕಾರಿ

Anti-Child Labor Day: Public awareness is necessary: ​​DC

ಕೊಪ್ಪಳ 12: ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳಾಗಿರುವುದರಿಂದ ಅವರ ಸರ್ವತೋಮುಖಅಭಿವೃದ್ಧಿಗೆ ಪೂರಕವಾಗಿ ನಮ್ಮ ಸಮಾಜವನ್ನುರೂಪಿಸಬೇಕು. ಸಮಾಜದಅನಿಷ್ಟ ಪದ್ದತಿಯಾದ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಈ ಕುರಿತುಜನರಿಗೆ ತಿಳಿ ಹೇಳಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್‌ಅವರು ಹೇಳಿದರು.ಗುರುವಾರದಂದು ಜಿಲ್ಲಾ ಪಂಚಾಯತ್‌ನಜೆ.ಎಚ್‌. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಮಕ್ಕಳ ರಕ್ಷಣಾಯೋಜನೆ, ಜಿಲ್ಲಾ ಬಾಲಕಾರ್ಮಿಕಯೋಜನಾ ಸಂಘ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಹಾಗೂ ಕಾನೂನು ಅರಿವು- ನೆರವುಕಾರ್ಯಕ್ರಮದಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.  

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.ಪಾಲಕರುತಮ್ಮ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡಬಾರದು.ಇದರಿಂದಅವರ ಬಾಲ್ಯವನ್ನು ಕಸಿದುಕೊಂಡಂತಾಗುತ್ತದೆ.ದೇಶದ ಭವಿಷ್ಯವಾದ ಮಕ್ಕಳ ವ್ಯಕ್ತಿತ್ವಅಭಿವೃದ್ಧಿಗೆ ಪೂರಕವಾಗುವಂತೆ ನಮ್ಮ ಸಮಾಜವನ್ನುರೂಪಿಸಬೇಕು ಎಂದು ಹೇಳಿದರು. 

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಮಾತನಾಡಿ, ಬಾಲ ಕಾರ್ಮಿಕರ ನಿರ್ಮೂಲನೆ ಕೇವಲ ಒಂದು ಇಲಾಖೆ ಕೆಲಸ ಮಾಡಿದರೆ ಸಾಲದು, ಇತರೆ ವಿವಿಧ ಇಲಾಖೆಗಳು, ಗ್ರಾಮ ಪಂಚಾಯತಿ ಪಿಡಿಓರಿಂದ ಹಿಡಿದುಆಯಾ ಶಾಲೆಗಳ ಮುಖ್ಯೋಪಾಧ್ಯಾಯರ ಮೇಲೆಯೂಜವಾಬ್ದಾರಿ ಇದೆ. ಮಕ್ಕಳು ಒಂದು ವಾರ ಶಾಲೆಗೆ ಬರದಿದ್ದರೆಯಾಕೆ ಬರಲಿಲ್ಲ. ಅವರಿಗೆ ಮದುವೆ ಮಾಡಲಾಗಿದೆಯೇ, ಕೆಲಸಕ್ಕೆ ಕಳಿಸಲಾಗಿದೆಯೆ ಅಥವಾಅವರಆರೋಗ್ಯ ಸರಿಯಾಗಿಲ್ಲವೆ ಎಂಬ ಮಾಹಿತಿಯನ್ನು ಶಿಕ್ಷಕರು ಸಂಗ್ರಹಿಸಬೇಕು ಹೇಳಿದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್‌ಎಸ್‌. ದರಗದಅವರು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ- 2025 ರ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಈ ದಿನಾಚರಣೆಉದ್ದೇಶ ಮಕ್ಕಳು ಯಾರೂಬಾಲಕಾರ್ಮಿಕರಾಗಿ ಉಳಿಯಬಾರದು ಎಂಬುದಾಗಿದೆ. ಎಷ್ಟೋಕಡೆಗೆ ಜನರಿಗೆ ಸರಿಯಾದ ಸೂರಿಲ್ಲ. ಅವರುತಮ್ಮ ಹೊಟ್ಟೆತುಂಬಿಸಲಾಗದೆಅವರ ಮಕ್ಕಳು ದುಡಿಮೆಗೆಕೈಜೋಡಿಸುತ್ತಿದ್ದಾರೆ. ಕೆಳವರ್ಗದ ಜನರಿಗೆಇನ್ನೂ ಬಹಳಷ್ಟು ಮೂಲಭೂತ ಸೌಲಭ್ಯಗಳನ್ನು ಕೊಡಬೇಕಿದೆ ಹೇಳಿದರು.ಜಿಲ್ಲಾಕಾರ್ಮಿಕಅಧಿಕಾರಿ ಸುಧಾಗರಗಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಮಕ್ಕಳಿಗೆ ಬಾಂಡ್‌ಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ್ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪರಶುರಾಮ್ ವೈ.ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾಯೋಜನೆ- ಯುನಿಸೆಫ್ ಕೊಪ್ಪಳದ ಸಂಯೋಜಕರಾದ ಹರೀಶ್‌ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ವಾರ್ತಾಇಲಾಖೆಯ ಸಹಾಯಕ ನಿರ್ದೇಶಕರಾದಡಾ.ಸುರೇಶ್ ಜಿ., ಕೊಪ್ಪಳ ವೃತ್ತದಕಾರ್ಮಿಕ ನೀರೀಕ್ಷಕರಾದ ಮಂಜುಳಾ, ಜಿಲ್ಲಾ ಬಾಲಕಾರ್ಮಿಕಯೋಜನೆಯಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಮಕ್ಕಳು ಸೇರಿದಂತೆಇತರೆ ಹಲವಾರುಜನರು ಉಪಸ್ಥಿತರಿದ್ದರು.