ಡೆಂಗ್ಯೂ ವಿರೋಧಿ ಮಾಸಾಚರಣೆ ಸಪ್ತಾಹದ ಕಾರ್ಯಕ್ರಮ
ಕುಕನೂರ 04: ಸಮುದಾಯ ಆರೋಗ್ಯ ಕೇಂದ್ರ ಕುಕನೂರ ವ್ಯಾಪ್ತಿಯಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಡೆಂಗ್ಯೂ ವಿರೋಧಿ ಮಾಸಾಚರಣೆ ಸಪ್ತಾಹದ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಆರೋಗ್ಯ ಜಾಗೃತಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನು : ಗೋವಿಂದರಾವ್ ಆರೋಗ್ಯ ಮಿತ್ರ. ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಹಾಗೂ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ವಿದ್ಯಾರ್ಥಿಗಳಿಗೆ ಸರಕಾರದ ಯೋಜನೆಗಳನ್ನು ಪಡೆದುಕೊಳ್ಳುವ ಮಾಹಿತಿಯನ್ನು ನೀಡಿದರು ಮತ್ತು ಕರಪತ್ರದೊಂದಿಗೆ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ಅಡಿಯಲ್ಲಿ ಗಂಭೀರವಾದ ಕಾಯಿಲೆಗಳ ಬಗ್ಗೆ ಹಾಗೂ ಜ್ಯೋತಿ ಸಂಜೀವಿನಿ ಯೋಜನೆ ಬಗ್ಗೆ, ಹಾಗೂ ಅಂಗಾಂಗ ಕಸಿ ಯೋಜನೆ ಬಗ್ಗೆ, ಯಶಸ್ವಿನಿ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಇವತ್ತಿನ ಪಾತ್ರ ಬಹು ಮುಖ್ಯವಾಗಿರುತ್ತದೆ ಮತ್ತು ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದ ಯೋಜನೆಗಳನ್ನು ಯಾವ ರೀತಿ ಸದುಪಯೋಗ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಆರೋಗ್ಯ ಮಿತ್ರ ಅವರು ಸ್ವ ವಿವರಣೆಯನ್ನು ನೀಡಿದರು.
ಶಿಲ್ಪ ಸಿಎಚ್ಒ ಮಾರಕವಾದ ಡೆಂಗ್ಯೂ ರೋಗದಿಂದ ತಪ್ಪಿಸಿಕೊಳ್ಳಲು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಕಾಲೇಜ್ ವಿದ್ಯಾರ್ಥಿ ವಿದ್ಯಾರ್ಥಿಗಳ ಪಾತ್ರ ಬಹು ತಮ್ಮ ತಮ್ಮ ಮನೆ ಸುತ್ತಮುತ್ತಲಿನ ಸೋಳ್ಳೆ ಉತ್ಪತ್ತಿಗೆ ಕಾರಣ ವಾಗುವ ತ್ಯಾಜ್ಯ ವಸ್ತು ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಮಾರಕ ರೋಗ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯನ್ನ ಕಾಪಾಡಿಕೊಳ್ಳಿ ಎಂದು ವಿದ್ಯರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅದ್ಯಕ್ಷೆಯನ್ನು ಚನ್ನಬಸಪ್ಪ ಹಳ್ಳಿಕೇರಿ ಪ್ರಾನ್ಸಪಾಲರು ವಹಿಸಿಕೊಂಡು ಮಾತನಾಡಿ ಆರೋಗ್ಯ ಇಲಾಖೆಯು ನಮ್ಮ ಸಂಸ್ಧೆಗೆ ಆಗಮಿಸಿದಾಗ ಹಲವಾರು ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಬಂದಿರುವ ಅದು ನಮ್ಮ ವಿದ್ಯಾರ್ಥಿಗಳ ಬಗ್ಗೆ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉತ್ತಮ ಸಮಾಜವನ್ನು ನಿರ್ವಹಿಸುವ ವ್ಯಕ್ತಿಗಳು ಆಗಬಹುದು ಎಂದು ಹೇಳಿದರು ಕಾರ್ಯಕ್ರಮದ ಸ್ವಾಗತ ಚಿದಾನಂದಪ್ಪ ಡಿ ನೆರವೇರಿಸಿದರು , ನಿರೂಪಣೆಯ ಮಂಜಪ್ಪ ಸರ ಆರೋಗ್ಯ ಇಲಾಖೆಯ ನೆರವೇರಿಸಿದರು, ಆರೋಗ್ಯ ಇಲಾಖೆಯ ಕಾಳಪ್ಪ ಕುಂಬಾರ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಯ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಇದ್ದರು.