ಬೆಳಗಾವಿ 11: ಚಿಕ್ಕೋಡಿ ತಾಲ್ಲೂಕಿನ ಉಮರಾಣಿ ಗ್ರಾಮದಲ್ಲಿ ಇತ್ತಿಚಿಗೆ ಮುಳ್ಳಿನ ಪೊದೆಯಲ್ಲಿ ನವಜಾತ ಗಂಡು ಶಿಶುವನ್ನು ಅಪರಿಚಿತರು ಬಿಟ್ಟು ಹೊಗಿದ್ದು, ನಂತರ ಸ್ಥಳಿಯರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿರುತ್ತಾರೆ. ಮಾಹಿತಿ ತಿಳಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಗುವನ್ನು ರಕ್ಷಣೆ ಮಾಡಿ ಮಗುವಿನ ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿರುತ್ತಾರೆ. ಸದ್ಯ ಮಗುವಿನ ಆರೋಗ್ಯ ಸುಧಾರಣೆಯಾಗಿದ್ದು, ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಪಡಿಸಲಾಗಿರತ್ತದೆ.
ಸದರಿ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯವರ ಆದೇಶದ ಮೇರೆಗೆ ತಾತ್ಕಾಲಿಕವಾಗಿ ರಕ್ಷಣೆ ಮತ್ತು ಪೋಷಣೆಗಾಗಿ ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರದಲ್ಲಿ ಅಭಿರಕ್ಷಣೆಗಾಗಿ ಇಡಲಾಗಿದೆ. ಮಗುವಿನ ಜೈವಿಕ ಪಾಲಕರು ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪ್ಲಾಟ ನಂ.2688, ಸೆಕ್ಟರ್ ನಂ.12 ಡಬಲ್ ರೋಡ ಶ್ರೀನಗರ, ಬೆಳಗಾವಿ ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ 0831-2474111 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಡಾ. ಪರ್ವಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.