ಜನ ವಿರೋಧಿ ಕಾಯ್ದೆಗಳನ್ನು ಜಾರಿಗೋಳಿಸುತ್ತಿರುವ ಸರ್ಕಾರಗಳ ವಿರುದ್ಧ ಪ್ರತಿಭಟಿಸಿ ರಾಷ್ಟ್ರಪತಿಗೆ ಮನವಿ
ಕೊಪ್ಪಳ 21 : ಜಂಟಿಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಕಿಸಾನ್ ಮೋರ್ಛಾ ಜಂಟಿಯಾಗಿ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ಗಳ ಜಾರಿಯನ್ನು ವಿರೋಧಿಸಿ ನಗರದ ಅಶೋಕ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ತಹಶೀಲ್ ಕಛೇರಿಯ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರ ಮತ್ತು ಮಹಾವೀರ ಅಳ್ಳಳ್ಳಿ ಅವರ ಮೂಲಕ ಮನವಿ ರವಾನಿಸಲಾಯಿತು.
ಮನವಿಯಲ್ಲಿ ರೈತ ವಿರೋಧಿ ನೀತಿಗಳನ್ನು ರದ್ದುಗೊಳಿಸಿ. ದುಡಿಯುವ ವರ್ಗದ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಮೇ 20, ಮಂಗಳವಾರ ರಂದು ದೇಶವ್ಯಾಪಿ ಬೃಹತ್ ಹೋರಾಟಕ್ಕೆಕರೆ ನೀಡಿದ ಹಿನ್ನೆಲೆ ಕೊಪ್ಪಳ ನಗರದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಮತ್ತುರಾಜ್ಯ ಸರ್ಕಾರಗಳೆರಡೂ ದುಡಿಯುವಜನರ ಬದುಕನ್ನು ಛಿದ್ರಗೊಳಿಸುವ, ಕಾರ್ೋರೇಟ್ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಶ್ರಮ ವಿರೋಧಿ ಕಾಯ್ದೆಗಳನ್ನು ತರಲು ಹೊರಟಿವೆ. ದುಡಿಯುವ ಜನರ ಬದುಕಿನ ಮೇಲೆ ನಡೆಯಲಿರುವ ಈ ಪ್ರಹಾರವನ್ನು ವಿರೋಧಿಸಿ ಜೆಸಿಟಿಯು (ಜಾಯಿಂಟ್ಕಮಿಟಿಆಫ್ಟ್ರೇಡ್ಯೂನಿಯನ್) ಮತ್ತುಎಸ್.ಕೆ.ಎಂ.(ಸಂಯುಕ್ತಕಿಸಾನ್ ಮೋರ್ಛಾ) ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದ್ದು, ದೇಶವ್ಯಾಪಿಯಾಗಿ ರೈತರು ಮತ್ತು ಕಾರ್ಮಿಕರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಕ್ಕಿಳಿದಿದ್ದಾರೆ. ಕರ್ನಾಟಕರಾಜ್ಯದಲ್ಲಿಕಾಂಗ್ರೆಸ್ ಸರ್ಕಾರವೂ ಬಿಜೆಪಿ ತಂದಿದ್ದ ನೀತಿಗಳನ್ನೇ ಮುಂದುವರೆಸುತ್ತಿರುವುದರಿಂದ ಮತ್ತುಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಟ್ಟ ಮಾತುಗಳನ್ನೆಲ್ಲಾ ಮರೆತಿರುವುದರಿಂದರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧವೂರೈತಹಿಕಾರ್ಮಿಕರುಸೇರೀತೀವ್ರಸ್ವರೂಪದಪ್ರತಿಭಟನೆದಾಖಲಿಸಬೇಕಿದೆ.ಭಾರತದ ಕಾರ್ಮಿಕರೆಂದರೆ ಯಾವುದೇ ಭದ್ರತೆ ಇಲ್ಲದೆ, ಮಾಲೀಕರಿಗೆ ಯಾವುದೇ ಹೊಣೆಗಾರಿಕೆ ಇಲ್ಲದೆ, ಅಗ್ಗದ ಕೂಲಿ ದರದಲ್ಲಿಅತಿ ಹೆಚ್ಚು ಗಂಟೆದುಡಿಯುವ, ಅಪಾಯಕಾರಿ ಪರಿಸ್ಥಿತಿಗಳಲ್ಲೂ ಕೆಲಸ ಮಾಡುವ ನವ ಗುಲಾಮರನ್ನಾಗಿ ಮಾಡುವುದು. ಮನಬಂದಂತೆಕಾರ್ಮಿಕರನ್ನು ದುಡಿಸಿಕೊಳ್ಳುವ, ಬೇಡವಾದರೆ ಬಿಸಾಕುವ ಸಂಪೂರ್ಣ ಸ್ವಾತಂತ್ರ್ಯ ಮಾಲೀಕರಿಗೆ ನೀಡುವುದು. ಅಗ್ಗದದರದಲ್ಲಿ ಭೂಮಿ, ಉಚಿತಕರೆಂಟುಹೀನೀರು ಒದಗಿಸಿ, ತೆರಿಗೆಯಲ್ಲಿ ಸಬ್ಸಿಡಿ ನೀಡಿ, ಬ್ಯಾಂಕ್ ಲೋನ್ ಮನ್ನಾ ಮಾಡಿ, ಹೊಸ ಕಂಪನಿಗಳಿಗೆ 20 ಲಕ್ಷ ಕೋಟಿಯವರೆಗೂ ಉತ್ತೇಜನ ನಿಧಿಕೊಟ್ಟು ಪ್ರೋತ್ಸಾಹಿಸಲಾಗುತ್ತದೆ. ಸರ್ಕಾರದ ಒಡೆತನದಲ್ಲಿದ್ದ ರಸ್ತೆ, ವಿದ್ಯುಚ್ಛಕ್ತಿ, ಪೆಟ್ರೋಲ್, ಡೀಸೆಲ್, ಗ್ಯಾಸ್, ಮಿಲಿಟರಿ ಉತ್ಪಾದನೆ, ವಿಮಾನ, ರೈಲ್ವೆ, ಸ್ಟೀಲ್ - ಉಕ್ಕು ಹಿಕಲ್ಲಿದ್ದಲನ್ನುತಯಾರಿಸುವ ಕೈಗಾರಿಕೆಗಳು, ಬ್ಯಾಂಕ್ - ಎಲ್ ಐ ಸಿ, ಎಲ್ಲವುಗಳನ್ನೂ ಖಾಸಗೀಕರಣ ಮಾಡಿ ಖಾಸಗೀ ಖದೀಮರಿಗೆ ಅರ್ಿಸುವುದು. ಸರ್ವಂ ಕಾರ್ೋರೇಟ್ ಮಯಂ. ಕಾರ್ಮಿಕರ ಪಾಲಿಗೆ ಸರ್ವಂ ಸರ್ವನಾಶಂ. ಸಾರ್ವಜನಿಕರ ಮತ್ತು ದೇಶದ ಸಕಲ ಸಂಪತ್ತು ಅದಾನಿ ಹಿ ಅಂಬಾನಿ ಸ್ವಾಹಂಸ್ವಾಹಂವಾಗುತ್ತಿದೆ.ಮಿಲಿಯಂತರ ಜನಹಸಿವು, ಬಡತನ, ನಿರುದ್ಯೋಗ, ಶಿಕ್ಷಣ, ಇನ್ನಿತರ ಸಮಸ್ಯೆಗಳಿಂದ ಜನ ಜರ್ಜರಿತರಾಗಿದ್ದಾರೆ . ಕನಿಷ್ಠ ಶಿಕ್ಷಣ, ಆರೋಗ್ಯ, ಉದ್ಯೋಗಎಲ್ಲವೂ ಮಾರಾಟದ ವಸ್ತುವಾಗುತ್ತಿದೆ. ಕೇಂದ್ರ ಮತ್ತುರಾಜ್ಯ ಸರ್ಕಾರಗಳು ದುಡಿಯುವ ಕಾರ್ಮಿಕ ವರ್ಗಕ್ಕೆ,, ರೈತರಿಗೆ ವಿದ್ಯಾರ್ಥಿ ಯುವಜನ, ಮಹಿಳೆಯರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಕೂಡಲೇ ಜಾರಿಗೆ ತರಬೇಕೆಂದು ಜೆಸಿಟಿಯು ಮತ್ತು ಎಸ್ ಕೆ ಎಮ್ ವತಿಯಿಂದ ಈ ಮೂಲಕ ಒತ್ತಾಯಿಸುತ್ತದೆ.
ಮುಖ್ಯವಾಗಿ ನಮ್ಮ ಬೇಡಿಕೆಗಳಾದ ಕೇಂದ್ರ ಸರ್ಕಾರವುಜಾರಿ ಮಾಡಲು ಬಯಸುತ್ತಿರುವ “4 ಲೇಬರ್ಕೋಡ್” ಗಳನ್ನು ಹಾಗೂ “ಕೃಷಿ ಉತ್ಪನ್ನಗಳ ಮಾರುಕಟ್ಟೆಗಾಗಿರಾಷ್ಟ್ರೀಯಚೌಕಟ್ಟು ನೀತಿ”ಯನ್ನು ಈ ಕೂಡಲೇ ಹಿಂಪಡೆಯಬೇಕು.ಕೇಂದ್ರರಾಜ್ಯ ಸರ್ಕಾರಕೊಟ್ಟ ಮಾತಿನಂತೆರೈತರಿಗೆ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು.ಹಾಗೂ “ಭೂತಿದ್ದುಪಡಿಕಾಯ್ದೆ”, “ಎಪಿಎಂಸಿ ಕಾಯ್ದೆ”, “ಜಾನುವಾರುಕಾಯ್ದೆ”,ಬಗರ್ ಹುಕುಂ ರೈತರಿಗೆ ಹಕ್ಕುಪತ್ರ, ರೈತರ ಸಾಲಮನ್ನಾ ಮುಂತಾದ ಹಕ್ಕೊತ್ತಾಯಗಳ ಕುರಿತುಚರ್ಚಿಸಲುರೈತ ಮತ್ತುಕಾರ್ಮಿಕ ಸಂಘಟನೆಗಳ ಜೊತೆಕೇಂದ್ರ ಮತ್ತುರಾಜ್ಯ ಸರ್ಕಾರಗಳು ಕೂಡಲೇ ಸಭೆಕರೆಯಬೇಕು.ಎಲ್ಲಾಅಸಂಘಟಿತ ವಲಯದಕಾರ್ಮಿಕರಿಗೆಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ ಸಾಮಾಜಿಕ ಭದ್ರತೆ, ಸವಲತ್ತುಗಳನ್ನು ಖಾತ್ರಿಪಡಿಸಿ. ದಿನದದುಡಿಮೆಯಅವಧಿಯನ್ನು 8 ಗಂಟೆಯಿಂದ 12 ಗಂಟೆಗೆಏರಿಸುವಕಾರ್ಮಿಕ ವಿರೋಧಿ ನಿಲುವು ಹಿಂಪಡಿಯಬೇಕು.ಎಲ್ಲಾ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಸಾಂವಿಧಾನಿಕ ಹಕ್ಕನ್ನಾಗಿ ಮಾಡಿ,ಆಶಾ, ಆಂಗನವಾಡಿ, ಬಿಸಿಯೂಟ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಿ, ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ.ಅನಾಹುತಕಾರಿ ಕಾರ್ಖಾನೆಗಳಲ್ಲಿ ಮಹಿಳೆಯರನ್ನು ದುಡಿಸುವುದು ಮಹಿಳಾ ಕಾರ್ಮಿಕರುರಾತ್ರಿ ಪಾಳಿಯದಲ್ಲೂ ಕೆಲಸ ಮಾಡಿಸುವ ವಿಚಾರಕೈಬಿಡಬೇಕು.ಕಾರ್ಮಿಕರಿಗೆ ಪೆನ್ಷನ್, ಪಿಎಫ್, ಇಎಸ್ಐ ವೇಗವಾಗಿ ಜಾರಿಯಾಗಬೇಕು, ಕಂಪನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಬಾರದು ಎಂದು ಕೊಪ್ಪಳ ಜಿಲ್ಲಾಜಂಟಿಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಮುಖಂಡರಾದ ಎಐಯುಟಿಯುಸಿ ಶರಣುಗಡ್ಡಿ ,ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಸಿಂ ಸರ್ದಾರ್,ಎಐಟಿಯುಸಿ ಜಿಲ್ಲಾಅಧ್ಯಕ್ಷ ಬಸವರಾಜ್ ಶೀಲವಂತರ್, ಜನಪರ ಸಂಘಟನೆಗಳ ಒಕ್ಕೂಟದಅಧ್ಯಕ್ಷಎಸ್.ಎ.ಗಫಾರ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾಅಧ್ಯಕ್ಷಚನ್ನಬಸಪ್ಪಅಪ್ಪಣ್ಣವರ್,ಆಶಾ ಸಂಘದ ಕೊಪ್ಪಳ ತಾಲ್ಲೂಕಅಧ್ಯಕ್ಷೆ ಸುನೀತಾಆಚಾರ,ಮುಖಂಡ ಗಾಳೆಪ್ಪ ಮುಂಗೋಲಿ,ಮುದುಕಪ್ಪ, ಈರ್ಪ, ವೇಕಟೇಶ್ರೆಡ್ಡಿ,ಗ್ರಾಮ ಪಂಚಾಯತಿ ನೌಕರ ಸಂಘದತಾಲೂಕಾಧ್ಯಕ್ಷಅಂಬರೀಶ್ಗಾಣಿಗ,ಸ್ವಚ್ಛ ವಾಹಿನಿಯ ಸಂಚಾಲಕಿ ರತ್ನಕೇಸ್ಲಾಪುರ್, ರಂಗಮ್ಮ, ತಾಜುದ್ದೀನ್ ಬೆಳಗಟ್ಟಿ. ಮಂಜುನಾಥ್.ಶಾಂತಮ್ಮಎಲಿಗಾರ್, ಪ್ರದೀಪ್ ಮುಂತಾದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.