ಕಂಪ್ಲಿ 03: ದೇಶದಲ್ಲಿ ತಂಬಾಕು ಮುಕ್ತ ಸಮಾಜ ನಿರ್ಮಾಣವಾಗ ಬೇಕಾದರೆ ಯುವಕರ ಸಹಕಾರ ತುಂಬ ಅವಶ್ಯಕ ಎಂದು ದಂತ ವೈದ್ಯಧಿಕಾರಿ ಡಾ.ಶ್ರೀನಿವಾಸ ಹೇಳಿದರು ಪಟ್ಟಣದ ಪ್ರಾಥಮಿಕ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಏರ್ಾಡಿಸಿದ ವಿಶ್ವ ತಂಬಾಕು ರಹಿತ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ದುಶ್ಚಟಗಳಿಗೆ ಬಲಿಯಾಗಿ ಜೀವ ಹಾಗೂ ಜೀವನದ ಮೌಲ್ಯಗಳನ್ನು ಕಳೆದುಕೊಳ್ಳಬೇಡಿ ತಂಬಾಕು ಅರೋಗ್ಯಕೇ ಹಾನಿಕರ ಅದರಿಂದ ದೂರವಿರಿ.
ತಂಬಾಕು ಸೇವನೆಯಿಂದ ಹಲವಾರು ರೋಗಳಿಗೆ ತುತ್ತಾಗಬೇಕಾಗುತ್ತದೆ, ರೋಗಗಳು ಬಂದ ಮೇಲೆ ಎಚ್ಚೆತ್ತುಕೊಳ್ಳುವುದಕ್ಕಿಂತ ರೋಗಗಳು ಬಾರದಂತೆ ಎಚ್ಚರಿಕೆ ವಹಿಸಬೇಕಾದರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರವಿರಬೇಕೆಂದರು ಆರೋಗ್ಯದ ದೃಷ್ಟಿಯಿಂದ ತಂಬಾಕು ಉತ್ಪನ್ನಗಳ ಸೇವನೆಯನ್ನು ತ್ಯಜಿಸುವಂತೆ ಸಾರ್ವಜನಿಕರಲ್ಲಿ ವಿಶೇಷವಾಗಿ ಯುವಜನತೆಯಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ.ಹಾರಿಕ, ಡಾ.ವಿಶ್ವನಾಥ್, ಆರೋಗ್ಯ ನೀರೀಕ್ಷಣಾಧಿಕಾರಿ ಪಿ.ಬಸವರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶೋಭ, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು, ಎನ್.ಸಿಡಿ ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.