ಕಾಗವಾಡ, 07 : ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.ಅವರು ಶನಿವಾರ ದಿ.07 ರಂದು ತಾಲ್ಲೂಕಿನ ಐನಾಪೂರ ಪಟ್ಟಣದಲ್ಲಿ ಗುಣಧನಂದಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಜೈನ ಸಮಾವೇಶದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡು ತ್ತಿದ್ದರು. ಜೈನ ಸಮಾಜ ಒಂದು ತಾತ್ವಿಕ ಹಾಗೂ ಅಹಿಂಸಾ ತತ್ವಗಳನ್ನು ಅಳವಡಿಸಿಕೊಂಡು, ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯ ಸರಕಾರ ಸಣ್ಣ ಸಣ್ಣ ಸಮಾಜಗಳಿಗೆ ನಿಗಮ ಮಂಡಳ ನೀಡಿದೆ. ಆದರೆ ಜೈನ ಸಮಾಜಕ್ಕೆ ನೀಡದೆ ಓಲೈಕೆ ರಾಜಕಾರಣ ಮಾಡುತ್ತಿದೆ. ಇದನ್ನು ನೋಡಲು ಆಗುತ್ತಿಲ್ಲಾ. ಜೈನ ಸಮಾದ ಮೇಲೆ, ಸಮುದಾಯದ ಸಾದುಗಳ ಮೇಲೆ ಆಗುತ್ತಿರುವ ಅನ್ಯಾಗಳ ವಿರುದ್ಧ ಸಮಾಜ ಎಚ್ಚರವಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಡೆಯುತ್ತಿರು ಜೈನ ಸಮಾವೇಶ ಲಕ್ಷಾಂತರ ಜನರನ್ನು ಸೇರಿ ಸರಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸವನ್ನು ಗುಣಧರನಂಧಿ ಮಹಾರಾಜರು ಮಾಡುತ್ತಿದ್ದ ಸೂಕ್ತವಾಗಿದೆ ಎಂದು ಹೇಳಿದರು.ಶಾಂತಿಪ್ರಿಯ ಜೈನ ಸಮಾಜದ ಬೇಡಿಕೆ ನ್ಯಾಯ ಸಮ್ಮತವಾಗಿದ್ದು ಸರಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಅವರ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರು ಕೈ ಜೋಡಿಸಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು. ಈ ವೇಳೆ ಗುಣಧರನಂಧಿ ಮಹಾರಾಜರು ಮಾತನಾಡಿ, ಈ ದೇಶದಲ್ಲಿ ಅಲ್ಪಸಂಖ್ಯಾತರಲ್ಲಿ ಆರು ಸಮುದಾಯಗಳು ಸರಕಾರಗಳು ಕೇವಲ ಮುಸ್ಲಿಂ ಸಮಾಜವನ್ನು ತುಷ್ಠಿಕರಿಸುತ್ತಿದ್ದು ಜೈನ ಸಮಾಜವನ್ನು ನಿರ್ಲಕ್ಷ್ಯಸುತ್ತಿದ್ದು ನಮ್ಮ ನ್ಯಾಯಯುತ ಬೇಡಿಕೆ ಈಡೇರಿಸದಿದ್ದರೆ ನನ್ನ ಉಗ್ರರ ನಿರ್ಧಾವನ್ನು ಅದೇ ವೇದಿಕೆಯಲ್ಲಿ ತಿಳಿಸಿಲಾಗುವುದು ಎಂದು ಎಚ್ಚರಿಸಿದರು.
ರವಿವಾರದಂದು ನಡೆಯುವ ಕೊನೆಯ ದಿನದ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ತಾವರಚಂದ ಗೆಹ್ಲೋತ,ಹಲವು ಸಚಿವರು,ಶಾಸಕರು ಭಾಗಹಿಸಲಿದ್ದಾರೆ ಎಂದು ತಿಳಿಸಿದರು.ಈ ಸಮಯದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಿಗಿಮಠ, ಮಾಜಿ ಶಾಸಕರಾದ ಕಲ್ಲಪ್ಪಣ್ಣ ಮಗ್ಗೆಣ್ಣವರ, ಮೋಹನ ಶಹಾ, ಕೆ ಎ ವಣಜೋಳ, ದೀಪಕ ಪಾಟೀಲ, ಅರುಣ ಯಲಗುದ್ರಿ, ಸಂಜಯ ಕೂಚನೂರೆ, ರಾಜು ಪಾಟೀಲ, ಸುನೀಲ ಪಾಟೀಲ, ಅಮರ ದುರ್ಗಣ್ಣನವರ ಸೇರಿದಂತೆ ಅನೇಕರು ಇದ್ದರು.