ಬಕ್ರೀದ್ ಹಬ್ಬದ ಶಾಂತಿ ಸಭೆ

Bakrid festival peace meeting

ಬಳ್ಳಾರಿ 03: ಕುರುಗೋಡು ತಾಲೂಕಿನಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಸಹಿಸುವುದಿಲ್ಲ. ಕೋಮುದ್ವೇಷ ಹರಡುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುವವರ ಮೇಲೆ ನಿಗಾ ಇಡಲಾಗಿದೆ. ಇಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ವಿಶ್ವನಾಥ ಹೀರೆಗೌಡ ಎಚ್ಚರಿಕೆ ನೀಡಿದ್ದಾರೆ.

ಹಾಗೂ ಜೂನ್ 7 ರ ಬಕ್ರೀದ್ ಹಬ್ಬದ ಅಂಗವಾಗಿ ಕುರುಗೋಡು ತಾಲೂಕಿನ ಪೊಲೀಸ್ ಠಾಣೆಯಲ್ಲು ಮಂಗಳವಾರ ಮುಖಂಡರ ಸೌಹಾರ್ದ ಸಭೆ ನಡೆಯಿತು. ಸಂಚಾರ ನಿಯಮ ಉಲ್ಲಂಘನೆ, ಸ್ವಚ್ಛತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚರ್ಚೆ ನಡೆಯಿತು.ಸಾಮಾಜಿಕ ಜಾಲತಾಣದಲ್ಲಿ ಹರಡುವ ವದಂತಿ ಸವಾಲಾಗಿ ಪರಿಣಮಿಸುತ್ತಿದೆ. ವಾಸ್ತವ ತಿರುಚಿ ಸಂದೇಶ ರವಾನಿಸುವ ಯುವಸಮೂಹ ಸಮಸ್ಯೆಗೆ ಸಿಲುಕುತ್ತಿದೆ. ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ’ ಎಂದು ಪಿಎಸ್ ಐ ಸುಪ್ರೀತ್ ವಿರುಪಾಕ್ಷಪ್ಪ ಹೇಳಿದರು.ಹಬ್ಬದಲ್ಲಿ ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಹಬ್ಬದ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ನಿಗದಿಗಿಂತ ಹೆಚ್ಚು ಜನರು ಸಂಚರಿಸಲು ಅವಕಾಶವಿಲ್ಲ. ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಮಾದಕ ದ್ರವ್ಯ ಕಳ್ಳಸಾಗಣೆ, ಮಾರಾಟ ಕಂಡುಬಂದರೆ ಮಾಹಿತಿ ನೀಡಿ’ ಎಂದು ಮನವಿ ಮಾಡಿದರು.

‘ತ್ಯಾಗ ಮತ್ತು ಸೌಹಾರ್ದ ಸಂಕೇತದ ಹಬ್ಬ ಬಕ್ರೀದ್‌. ಪ್ರೀತಿ, ಸಹೋದರತ್ವ ಸಾರಲು ಈ ಹಬ್ಬ ಮಾಡಲಾಗುತ್ತದೆ. ಬೇರೆ ಧರ್ಮೀಯರ ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಬಕ್ರಿದ್ ಹಬ್ಬ ಆಚರಣೆ ಮಾಡುವ ಅಗತ್ಯ ಇದೆ’ ಎಂದು ಮುಸ್ಲಿಂ ಸಮುದಾಯದ ಮುಖಂಡರು ಹೇಳಿದರು.