ಲೋಕದರ್ಶನ ವರದಿ
ಬಳ್ಳಾರಿ 20: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಸಂತಕವಿ ಸರ್ವಜ್ಞ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಸಂತಕವಿ ಸರ್ವಜ್ಞರ ಬೃಹತ್ ಭಾವಚಿತ್ರದ ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕರಾದ ಸಿದ್ದಲಿಂಗೇಶ್ ಕೆ ರಂಗಣ್ಣವರ ಅವರು ಗುರುವಾರ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಪ್ರಾರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಎಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು.
ಈ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಹಾಗೂ ವೇಷಧಾರಿಗಳ ಪ್ರದರ್ಶನಗಳು ಜನರ ಗಮನಸೆಳೆದವು. ಮೆರವಣಿಗೆಯಲ್ಲಿ ಜಿಲ್ಲಾ ಕುಂಬಾರ ಶಾಲಿವಾಹನ ಸಂಘದ ಜಿಲ್ಲಾಧ್ಯಕ್ಷ ಕೆ.ರಂಗಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು, ಕುಂಬಾರ ಸಮುದಾಯದ ಮುಖಂಡರು, ಜನರು ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಮತ್ತು ಇತರೆ ಗಣ್ಯವ್ಯಕ್ತಿಗಳು ಇದ್ದರು.