ಲೋಕದರ್ಶನ ವರದಿ
ಬಳ್ಳಾರಿ 21: ಭೂಮಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಈ ಕೆಳಗಿನ ಸೇವೆಗಳಿಗಾಗಿ ಸಾರ್ವಜನಿಕರ ಭೂಮಿ ಕೇಂದ್ರ ಮತ್ತು ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುತ್ತಿದ್ದು, ಇನ್ಮುಂದೆ ಇಂಟರ್ನೆಟ್ ವ್ಯವಸ್ಥೆ ಇರುವ ಯಾವುದೇ ಸ್ಥಳದಿಂದ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಖಾತಾ ಬದಲಾವಣೆ (ವಿಲ್, ವಿಭಾಗ, ಪೌತಿ, ಮೈನರ್ ಗಾರ್ಡ್ಯನ್), ಪೋಡಿ ವಿವರಗಳನ್ನು ಪಹಣಿಯಲ್ಲಿ ದಾಖಲಿಸಲು, ಭೂ ಪರಿವರ್ತನೆಯ ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು, ಸಾಲ ತಿರುವಳಿ ವಿವರಗಳನ್ನ ಪಹಣಿಯಲ್ಲಿ ಇಂಡೀಕರಣಗೊಳಿಸಲು.
ಸದರಿ ಪೋಟರ್್ಲ್ನಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ ಲಾಗಿನ್ ಆಗಬಹುದಾಗಿದೆ. ಸ್ಕ್ಯಾನ್ ಪಿಡಿಎಫ್ ದಾಖಲೆಗಳನ್ನು ಅಪ್ಲೋಡ್ ಮಾಡಿ ಆಧಾರ್ ಸಂಖ್ಯೆ ಬಳಸಿ ರಟಿ ಮಾಡಿದ ನಂತರ ಸ್ವೀಕೃತಿ ಪಡೆಯಬಹುದಾಗಿರುತ್ತದೆ.