ಭಗವದ್ಗೀತೆ ಭಗವಂತನಿಂದ ಬಂದ ಸಂದೇಶ : ಪರಮೇಶ್ವರ ಹೆಗಡೆ

Bhagavad Gita Message from Lord: Parameshwara Hegade

ಬೆಳಗಾವಿ 04: ಭಗವದ್ಗೀತೆ ಅಭಿಯಾನದ ಜಿಲ್ಲಾ ಮಟ್ಟದ ಸ್ಪರ್ಧೆ ಮಂಗಳವಾರ ಅನಗೋಳದ ಸಂತಮೀರಾ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷರೂ, ಸಂತ ಮೀರಾ ಶಾಲೆಯ ಅಧ್ಯಕ್ಷರೂ ಆಗಿರುವ ಪರಮೇಶ್ವರ ಹೆಗಡೆ ಮತ್ತು ಸಮಿತಿ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು ಭಗವದ್ಗೀತೆಯ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಕಿ 

ಶೋರ ಮತ್ತು ಪ್ರೌಢ ಎನ್ನುವ ಎರಡು ವಿಭಾಗಗಳಲ್ಲಿ, ಭಾಷಣ ಸ್ಪರ್ಧೆ, ಕಂಠಪಾಠ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆಗಳು ನಡೆದವು. ಸ್ಪರ್ಧೆಯ ನಂತರ ವಿಜೇತರಿಗೆ ಪರಮೇಶ್ವರ ಹೆಗಡೆ, ಎಂ.ಕೆ.ಹೆಗಡೆ, ಸಂತಮೀರಾ ಶಾಲೆಯ ಆಡಳಿತಾಧಿಕಾರಿ ರಾಘವೇಂದ್ರ ಕುಲಕರ್ಣಿ ಬಹುಮಾನಗಳನ್ನು ವಿತರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ ಹೆಗಡೆ, ಭಗವದ್ಗೀತೆ ಭಗವಂತನಿಂದ ಬಂದ ಸಂದೇಶ. ಅದನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕೆನ್ನುವ ಕಾರಣದಿಂದ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಿಂದ ಕಳೆದ 18 ವರ್ಷಗಳಿಂದ ಭಗವದ್ಗೀತೆ ಅಭಿಯಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು.ವಿದ್ಯಾ ಹೆಗಡೆ, ಶಾಂತಾ ಕಲ್ಲೂರಾಯ, ವಸುಮತಿ ಹೆಗಡೆ, ಸುಜಾತಾ ದಪ್ತಾರದಾರ್, ಶೋಭಾ ಹೆಗಡೆ, ಸಾವಿತ್ರಿ ಹೆಗಡೆ ನಿರ್ಣಾಯಕರಾಗಿ ಆಗಮಿಸಿದ್ದರು. ಶಾಲೆಯ ಮುಖ್ಯಾಧ್ಯಾಪಕಿ ಸುಜಾತಾ ದಪ್ತಾರದಾರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸರೋಜಾ ಕಟಗೇರಿ ಮತ್ತು ರೂಪಾ ಕುಮಟಾಕರ್ ಮತ್ತು ವೀಣಾ ಜೋಶಿ ನಿರೂಪಿಸಿದರು.  

ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಸ್ಪರ್ಧೆಗಳು ಡಿಸೆಂಬರ್ 13ರಂದು ಬೆಳಗ್ಗೆ 10.30ರಿಂದ ವಿಜಯಪುರದ ವಿದ್ಯಾಭಾರತಿ ಶಾಲೆಯಲ್ಲಿ ನಡೆಯಲಿದೆ. ಜಿಲ್ಲಾಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.