ವಿಜಯಪುರ ಮೇ.02: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ನಡೆದ ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಅಧ್ವೈತ ಅಂದರೇ ಏಕತ್ವದ ಸಿದ್ದಾಂತವನ್ನು ಪ್ರತಿಪಾದಿಸಿದವರು ಶಂಕರಾಚಾರ್ಯರು, ಮನುಕುಲಕ್ಕೆ ಅವರು ಸಾರಿದ ತತ್ವಾದರ್ಶಗಳು ದಾರೀದೀಪವಾಗಿವೆ ಎಂದು ತಿಳಿಸಿದರು.
ಅಂದಕಾರದಲ್ಲಿದ್ದ ಸಮಾಜವನ್ನು ಸನ್ಮಾರ್ಗ ತೊರಿಸುವ ಕಾರ್ಯವನ್ನು ಶಂಕರಾಚಾರ್ಯರು ಮಾಡಿದರು. ಅವರ ಆದರ್ಶ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಗಳಾಗಬೇಕು ಎಂದು ಅವರು ಹೇಳಿದರು. ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ಶಂಕರಾಚಾರ್ಯರು ತಮ್ಮ ಸಿದ್ಧಾಂತಗಳನ್ನು ಮನುಕುಲ ಉದ್ದಾರಕ್ಕೆ ಪ್ರತಿಪಾದಿಸಿದರು. ಅದ್ವೈತ ವೇದಾಂತವು ಭಾರತೀಯ ಆಧ್ಯಾತ್ಮಿಕತೆ, ಯೋಗ ಮತ್ತು ಧ್ಯಾನದ ಮೇಲೆ ಗಾಢವಾದ ಪ್ರಭಾವ ಬೀರಿವೆ ಎಂದು ಅವರು ತಿಳಿಸಿದರು.
ವೇದಾಂತದ ಬಗ್ಗೆ ತಮ್ಮ ಸಿದ್ಧಾಂತದಲ್ಲಿ ತಿಳಿಸಿದ ಶಂಕರಾಚಾರ್ಯರು ಜ್ಞಾನದ ಅರಿವಿನ ಅಂತಿಮ ಗುರಿಯನ್ನು ತಿಳಿಸಿಕೊಡುವುದೇ ವೇದಾಂತ ಎಂದು ಸಾರಿದರು.
ಶಂಕರಾಚಾರ್ಯರ ಸಿದ್ದಾಂತದ ಉಲ್ಲೇಖಗಳು ಅಸಂಖ್ಯಾತ ಅನ್ವೇಷಕರಿಗೆ ಅವರ ಆಧ್ಯಾತ್ಮಿಕ ಪ್ರಯಾಣದಲ್ಲಿ ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡಿವೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸಾಹಿತಿಗಳಾದ ಶ್ರೀ ರಾಜಶೇಖರ ಎನ್ (ರಾಜಸರಸ್ವತಿ) ಅವರು ಮಾತನಾಡಿ, ಶಂಕರಾಚಾರ್ಯರು ಅದ್ವೈತ ವೇದಾಂತದ ಮೂಲಕ ಮಾಯಾವಾದವನ್ನು ವಿವರಿಸಿ, ಜ್ಞಾನದಿಂದಲೇ ಮೋಕ್ಷ ಸಾಧ್ಯ ಎಂದು ಜಗತ್ತಿಗೆ ಒತ್ತಿ ಹೇಳಿದರು. ಶಂಕರಾಚಾರ್ಯರು ನೀಡಿರುವ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿಗಳಾದ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಮಹಿಪತಿ ದೇಸಾಯಿ, ಸಮಾಜದ ಮುಖಂಡರುಗಳಾದ ಶ್ರೀಹರಿ ಗೋಳಸಂಗಿ, ಮಹೇಶ ದೇಶಪಾಂಡೆ, ವೇದಮೂರ್ತಿ ಕೃಷ್ಣಭಟ್ಟ ಗಲಗಲಿ, ಅಶೋಕ ಕುಲಕರ್ಣಿ, ಶ್ರೀನಿವಾಸ ಬೆಟ್ಟಗೇರಿ, ಗೀರೀಶ್ ಕುಲಕರ್ಣಿ, ದೇವೆಂದ್ರ ಮಿರೆಕರ್ ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಮೆರವಣಿಗೆಗೆ ಚಾಲನೆ : ನಗರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಆದಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೆರವಣಿಗೆಗೆ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಚಾಲನೆ ನೀಡಿದರು.ಭವ್ಯ ಮೆರವಣಿಗೆಯೂ ವಿವಿಧ ಜಾನಪದ ಕಲಾತಂಡದೊಂದಿಗೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಸಾಗಿ ಸಮಾವೇಶಗೊಂಡಿತು.