ಹಾವೇರಿ: ಮಕ್ಕಳ ಹಕ್ಕು, ಕರ್ತವ್ಯ ಹಾಗೂ ರಕ್ಷಣಾ ಕಾಯ್ದೆಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಭಗತ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿರೇಶ್ ಹಿತ್ತಲಮನಿ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾವೇರಿ ಇವರ ಆಶ್ರಯದಲ್ಲಿ ಮಂಗಳವಾರ ನಗರದ ಭಗತ್ ಪದವಿ ಪೂರ್ವ ಕಾಲೇಜಿನಲ್ಲಿ ಪೊಕ್ಸೋ ಕಾಯ್ದೆ-2012, ಮಕ್ಕಳ ಹಕ್ಕುಗಳು ಹಾಗೂ ಸಂರಕ್ಷಣೆಯ ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಣ್ಣುಮಕ್ಕಳ ರಕ್ಷಣೆಗೆಂದೆ ಅನೇಕ ಜಾಗೃತಿ ಕಾರ್ಯಕ್ರಮವನ್ನು ಸಕರ್ಾರ ಹಮ್ಮಿಕೊಂಡಿದೆ. ವಿದ್ಯಾಥರ್ಿಗಳು ಸ್ವ ಜಾಗೃತಿ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಸಮಾಜವನ್ನು ಗೌರವಿಸಬೇಕು ಉತ್ತಮ ಪ್ರಜೆಯಾಗಬೇಕು ಎಂದು ಹೇಳಿದರು.
ಮಕ್ಕಳಿಗೆ ಕಾನೂನಿನ ಅರಿವು ಅವಶ್ಯಕವಾಗಿದೆ. ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯ ವಿವಾಹ, ಪೊಕ್ಸೋ- 2012, ಮೋಟಾರು ಕಾಯ್ದೆ, ಬಾಲ ಕಾಮರ್ಿಕತೆ, ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿದರ್ೇಶಕ ಪಿ.ವೈ.ಶೆಟ್ಟಪ್ಪನವರ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಲ್ಲಿಕಾಜರ್ುನ ಮಠದ, ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.