ಹಾನಗಲ್ 17: ಸ್ಥಳೀಯ ಪುರಸಭೆಯ ಹೊರವಲಯದ ಪರಿಶಿಷ್ಟ ಜಾತಿಯ ಸುಡುಗಾಡುಸಿದ್ದ ಮತ್ತು ಡೊಂಬರ ಸಮುದಾಯದ ಜನತೆ ವಾಸಿಸುತ್ತಿರುವ ಕಾಲೋನಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ 29 ಲಕ್ಷ ಅನುದಾನದಲ್ಲಿ ಸಿಸಿರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಗಳವಾರ ಸಂಜೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಹಾನಗಲ್ ನಗರ ವ್ಯಾಪ್ತಿಯಲ್ಲಿ ನಗರೋತ್ಥಾನದಡಿ 5 ಕೋಟಿ,ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಮಳಗಿ ಧರ್ಮಾ ಜಲಾಶಯದಿಂದ ನೇರವಾಗಿ ಪೈಪಲೈನ್ ಮೂಲಕ ಆನಿಕೆರೆಗೆ ನೀರು ಹರಿಸುವ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನತೆ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಮಾನೆ ಇದೇ ಸಂದರ್ಭದಲ್ಲಿ ತಿಳಿಸಿದರು.
ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಉಪಾಧ್ಯಕ್ಷೆ ವೀಣಾ ಗುಡಿ, ಸದಸ್ಯ ಸುರೇಶ ನಾಗಣ್ಣನವರ, ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಗುರುರಾಜ ನಿಂಗೋಜಿ, ರಾಜೂ ಗುಡಿ, ರವಿ ದೇಶಪಾಂಡೆ, ಮುಖ್ಯಾಧಿಕಾರಿ ವೈ.ಕೆ.ಜಗದೀಶ್, ಯೋಜನಾಧಿಕಾರಿ ಶಿವಾನಂದ ಕ್ಯಾಲಕೊಂಡ, ಮಾರುತಿ ತಾಂದಳೆ, ಸೋಮಣ್ಣ ಕೂಡಲಗಿ, ವೀರೇಶ ಕೂಡಲಗಿ, ಮಂಜು ಡೊಂಬರ, ದುರುಗಪ್ಪ ವಿಭೂತಿ, ದುರುಗಪ್ಪ ಕರಿಯವರ ಸೇರಿದಂತೆ ಅನೇಕರಿದ್ದರು.