ಹಾವೇರಿ06: ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಬೇಕು. ವಿಮಾ ನೋಂದಣಿಗೆ ಬರುವ ರೈತರಿಗೆ ಮೂಲ ಆರ್.ಟಿ.ಸಿ. (ಪಹಣಿ) ಬೇಡಿಕೆ ಸಲ್ಲಿಸದೆ ಝರಾಕ್ಸ್ ಪ್ರತಿ ಮಾನ್ಯ ಮಾಡುವಂತೆ ಜಿಲ್ಲೆಯ ವಿವಿಧ ವಾಣಿಜ್ಯ ಬ್ಯಾಂಕ್, ಸಹಕಾರಿ ಬ್ಯಾಂಕ್ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚಿಸಿದರು.
ಮುಂಗಾರು ಹಂಗಾಮಿನ ಕನರ್ಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯಡಿ ಬೆಳೆವಿಮೆ ನೋಂದಣಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ತಹಶೀಲ್ದಾರ, ಕೃಷಿ, ತೋಟಗಾರಿಕೆ, ಬ್ಯಾಂಕ್ ಹಾಗೂ ವಿಮಾ ಕಂಪನಿ ಅಧಿಕಾರಿಗಳ ಸಭೆ ನಡೆಸಿದ ಅವರು ರೈತರಿಗೆ ಯಾವುದೇ ತರದ ಅನಾನುಕೂಲ ಆಗದಂತೆ ಬೆಳೆ ನೋಂದಣಿಗೆ ಸರಳವಾಗಿ ರೈತರು ನೋಂದಾಯಿಸಿಕೊಳ್ಳಲು ಬ್ಯಾಂಕ್ ಅಧಿಕಾರಿಗಳು ಸಹಕರಿಸುವಂತೆ ಸೂಚಿಸಿದರು.
ಬೆಳೆವಿಮೆ ನೋಂದಣಿಗೆ ರೈತರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಆಧಾರ ಕಾಡರ್್ ಜೊತೆಗೆ ಆರ್.ಟಿ.ಸಿ.(ಪಹಣಿ) ಸಲ್ಲಿಸುವುದು ಕಡ್ಡಾಯ. ಆದರೆ ಬ್ಯಾಂಕರ್ಸ್ಗಳು ತಹಶೀಲ್ದಾರರ ಸಹಿ ಹಾಗೂ ಮುದ್ರೆ ಇರುವ ಆರ್.ಟಿ.ಸಿ. ಪ್ರತಿಯನ್ನೇ ಸಲ್ಲಿಸುವಂತೆ ರೈತರಿಗೆ ಒತ್ತಾಯಮಾಡಬಾರದು. ಹಾಗೂ ಬೆಳೆ ದೃಢೀಕರಣ ಪತ್ರವು ಅಗತ್ಯವಿಲ್ಲ. ಆರ್.ಟಿ.ಸಿ.ಯ ಮೂಲ ಪ್ರತಿಯ ಬದಲು ಝರಾಕ್ಸ್ ಪ್ರತಿ ಅಥವಾ ಆನ್ಲೈನ್ ಪ್ರತಿಯನ್ನು ಸಲ್ಲಿಸಿದರೆ ಅದನ್ನು ಸ್ವೀಕರಿಸಿ ಮಾನ್ಯ ಮಾಡಬೇಕು. ಹೆಚ್ಚುವರಿ ಹಣ ವಸೂಲಿ, ರೈತರಿಗೆ ಅನಗತ್ಯ ದಾಖಲೆಗಳ ಬೇಡಿಕೆ ಸಲ್ಲಿಸದೆ ಅವರಲ್ಲಿ ಯಾವುದೇ ಗೊಂದಲ ಉಂಟುಮಾಡದೆ ಹೆಚ್ಚು ರೈತರು ಕಾಲಮಿತಿಯೊಳಗೆ ಬೆಳೆ ವಿಮೆ ನೋಂದಣಿಗೆ ಪ್ರೋತ್ಸಾಹಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಹಾಗೂ ನೋಂದಣಿ ಏಜೆನ್ಸಿಗಳಿಗೆ ಸೂಚನೆ ನೀಡಿದರು.
ಮುಂಗಾರು ಹಂಗಾಮಿನಲ್ಲಿ ಕನರ್ಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯಡಿ ಹೋಬಳಿ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ 36 ಬೆಳೆಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮೆಕ್ಕೆಜೋಳ ಹಾಗೂ ಸವಣೂರ ತಾಲೂಕಿನಲ್ಲಿ ಮೆಕ್ಕೆಜೋಳದ ಜೊತೆಗೆ ನೆಲಗಡಲೆ, ಹಾನಗಲ್ ತಾಲೂಕಿನಲ್ಲಿ ಮೆಕ್ಕೆಜೋಳದ ಜೊತೆಯಲ್ಲಿ ನೀರಾವರಿ ಭತ್ತ ಹಾಗೂ ವಾಣಿಜ್ಯ ಬೆಳೆಗಳ ವಿಮೆ ನೋಂದಣಿಗೆ ಅಧಿಸೂಚಿತ ಬೆಳೆಯಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು.
ಬೆಳೆ ವಿಮೆ ನೋಂದಣಿಗೆ ಜು.30 ಕೊನೆಯ ದಿನವಾಗಿದೆ. ಸೂರ್ಯಕಾಂತಿ ಬೆಳೆಗೆ ವಿಮೆ ಮಾಡಿಸಲು ಅ.14ರಂದು ಕೊನೆಯ ದಿನಾಂಕವಾಗಿದೆ. ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗೆ ಪ್ರತಿ ಹೆಕ್ಟೇರ್ಗೆ ನಿಗಧಿಪಡಿಸಿದ ವಿಮಾ ಮೊತ್ತಕ್ಕೆ ಶೇ.2 ರಷ್ಟು ಕಂತುಗಳನ್ನು ಪಾವತಿಸಬೇಕಾಗುತದೆ. ವಾಣಿಜ್ಯ ಬೆಳೆಗಳಿಗೆ ಶೇ.5ರಷ್ಟು ವಿಮಾ ಕಂತನ್ನು ಪಾವತಿಸಬೇಕಾಗುತ್ತದೆ. ಬೆಳೆವಾರು ವಿಮಾ ಮೊತ್ತ ಹಾಗೂ ಇಂಡೆಮ್ನಿಟಿ ಮಟ್ಟ ಹಾಗೂ ವಿಮಾ ಕಂತಿನ ವಿವರನ್ನು ಈಗಾಗಲೇ ಕೃಷಿ ಇಲಾಖೆ ಮೂಲಕ ರೈತರಿಗೆ ಮಾಹಿತಿ ಒದಗಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 2.80 ಲಕ್ಷ ರೈತರು ಮುಂಗಾರು ಹಂಗಾಮಿನ ಕೃಷಿ ಹಿಡುವಳಿದಾರರಿದ್ದು ಈ ಪೈಕಿ ಕನಿಷ್ಠ ಶೇ.40ರಷ್ಟು ರೈತರಾದರೂ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಬೇಕು. ತಾಲೂಕುವಾರು ಗುರಿ ನಿಗಧಿಪಡಿಸಿ ಕಾಲಮಿತಿಯೊಳಗೆ ನೋಂದಣಿಗೆ ಕ್ರಮವಹಿಸಲು ತಹಶೀಲ್ದಾರ, ಕೃಷಿ, ತೋಟಗಾರಿಕೆ ಹಾಗೂ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆ ಜಂಟಿ ನಿದರ್ೆಶಕ ಮಂಜುನಾಥ್ ಅವರು ಮಾತನಾಡಿ, ಕೃಷಿ ವಿಮೆ ನೋಂದಣಿಗೆ ಈ ವರ್ಷ ಮುಂಚಿತವಾಗಿ ಮಾಚರ್್ ತಿಂಗಳಲ್ಲೇ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ 2017ರಲ್ಲಿ 79000 ರೈತರು ಹಾಗೂ 2018 1.23 ಲಕ್ಷ ರೈತರು ಬೆಳೆವಿಮೆಗೆ ನೋಂದಾಯಿಸಿಕೊಂಡಿದ್ದರು. ಈ ಬಾರಿ ಕನಿಷ್ಠ 35 ರಿಂದ 40 ರಷ್ಟು ರೈತರು ಬೆಳೆವಿಮೆಗೆ ನೋಂದಾಯಿಸಿಲು ಗುರಿ ಹಾಕಿಕೊಳ್ಳಲಾಗಿದೆ. ವಾಣಿಜ್ಯ ಬ್ಯಾಂಕ್, ಸಹಕಾರಿ ಬ್ಯಾಂಕ್, ಗ್ರಾಮೀಣ ಬ್ಯಾಂಕ್ ಹಾಗೂ ಸಾರ್ವಜನಿಕ ಸೇವಾಕೇಂದ್ರಗಳ ಮೂಲಕ ನೋಂದಾಯಿಸಿಕೊಳ್ಳಬಹುದು.
2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಇಂಡೆಮ್ನಿಟಿ ಮೊತ್ತವನ್ನು ನೀರಾವರಿ ಬೆಳೆಗಳಿಗೆ ಶೇ.90 ಹಾಗೂ ಮಳೆಯಾಶ್ರಿತ ಬೆಳೆಗಳಿಗೆ ಶೇ.80ರಷ್ಟು ನಿಗಧಿಪಡಿಸಲಾಗಿದೆ. ರೈತರ ವಿಮಾ ನೋಂದಣಿ ವಿವರವನ್ನು ಸಂರಕ್ಷಣಾ ಪೋಟರ್್ನಲ್ಲಿ ದಾಖಲಿಸಿಸುವುದು, ವಿವರವನ್ನು ಸಕಾಲಕ್ಕೆ ವಿಮಾ ಕಂಪನಿಗಳಿಗೆ ವಗರ್ಾಯಿಸಬೇಕು. ಜಿಲ್ಲೆಯಲ್ಲಿ ಈವರೆಗೆ 238 ರೈತರು ವಿಮಾ ನೋಂದಣಿ ಮಾಡಿದ್ದಾರೆ ಎಂದು ವಿವರಿಸಿದರು.