ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಸಂವಿಧಾನ ಡಾ. ಅಂಬೇಡ್ಕರ್ ಸಂವಿಧಾನದಿಂದ ರಾಜಕೀಯದಲ್ಲಿ ಸಮಾನತೆ ಇದೆ, ಸಾಮಾಜಿಕವಾಗಿ ಸಮಾನತೆ ಇನ್ನು ಆಗಬೇಕಿದೆ : ಸಚಿವ ಎಚ್.ಕೆ. ಪಾಟೀಲ
ಗದಗ 14: ಸರ್ವ ಜನಾಂಗವನ್ನು ಸಮದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ. ಬಿ.ಆರ್ ಅಂಬೇಡ್ಕರ್ ಅವರು ರಚಿಸಿ ಕೊಟ್ಟರು. ಜೊತೆಗೆ ನಮ್ಮ ಕರ್ತವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ. ಅದೇ ರೀತಿ ಬಾಬು ಜಗಜೀವನರಾಮ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಗದಗ ಬೆಟಗೇರಿ ಹಾಗೂ ಗದಗ ಜಿಲ್ಲೆಯ ವಿವಿಧ ದಲಿತ ಪರ ಸಂಘಟನೆಗಳ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ , ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 118 ನೇ ಜಯಂತ್ಯೋತ್ಸವದ ವೇದಿಕೆ ಕಾರ್ಯಕ್ರಮವನ್ನು ನಗರದ ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ಏರಿ್ಡಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು.ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಆಶಯಗಳು ಇಂದಿನ ಕಾಲದಲ್ಲಿ ಸಾಕಾರ ಗೊಂಡಿವೆಯಾ ಎಂದು ನಮ್ಮನ್ನ ನಾವು ಪ್ರಶ್ನಿಸಬೇಕಿದೆ ಎಂದರು.ಅಸ್ಪೃಷ್ಯತೆಯಿಂದ ಅಂಬೇಡ್ಕರ್ ನೋವು ಉಂಡಿದ್ದರು. ದೇಶದಲ್ಲಿ ಇದ್ದ ಅನಿಷ್ಟ ಪದ್ದತಿ ಹೋಗಲಾಡಿಸಲು ಸತತ ಓದು, ಅಧ್ಯಯನ ಮಾಡಿ ಸಂವಿಧಾನ ರಚಿಸಿದರು. ಸಮಾನತೆ, ಸಮಬಾಳಿನಿಂದ ಬದುಕುಲು ತಿಳಿಸಿದರು. ಆದರೆ, ಕಳೆದ 75 ವರ್ಷ ಸಮಾನತೆಯಿಂದ ಮೂಡಿದೆಯೇ ಎಂದು ಸಚಿವ ಎಚ್ ಕೆ ಪಾಟೀಲ ಹೇಳಿದರು.ರಾಜಕೀಯದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲಾಗಿದೆ. ಆದರೆ ಸಾಮಾಜಿಕ ಅಸ್ಪೃಶ್ಯತೆ ಇನ್ನೂ ಬೇರೂರಿದೆ. ಗ್ರಾಮಗಳಲ್ಲಿ ಈ ಪರಿಸ್ಥಿತಿ ಇನ್ನೂ ಇದೆ. ಸಾಮಾಜಿಕ ತೀವ್ರ ಸುಧಾರಣೆ ಪ್ರಸ್ತುತ ಅತ್ಯಂತ ಅವಶ್ಯವಿದೆ. ಸುಧಾರಣೆಗೆ ಹೋರಾಟ ಅವಶ್ಯವಿದೆ. ಆರ್ಥಿಕ ಸುಧಾರಣೆ ಗೂ ಪ್ರಾಮುಖ್ಯತೆ ನೀಡಬೇಕು ಎಂದರು.ಹಿಂದುಳಿದ ಸಮುದಾಯಕ್ಕೆ ಸರ್ಕಾರ ಅನೇಕ ಸೌಲಭ್ಯ ನೀಡಿದೆ. ಶಿಕ್ಷಣ, ಪುಸ್ತಕ, ವಸತಿಗೆ ಶುಲ್ಕ ನೀವು ನೀಡುವಂತಿಲ್ಲ. ವಿದ್ಯಾರ್ಥಿ ವೇತನ ಸರ್ಕಾರ ನೀಡುತ್ತದೆ. ಎಲ್ಲ ಸೌಲಭ್ಯ ಪಡೆದು ಮಕ್ಕಳನ್ನು ಆಸ್ತಿಯನ್ನಾಗಿಸಿಬೇಕು. ನಿಮ್ಮ ಬೆಳವಣಿಗೆ ನಿವೇ ಕಾರಣ ಆಗಬೇಕು ಎಂದರು.ಭಾರತ ಸುಭದ್ರ:ಭಾರತ ದೇಶದ ಸುತ್ತಮುತ್ತಲಿನ ದೇಶಗಳಲ್ಲಿ ಅಭದ್ರತೆ ಮೂಡಿದೆ. ಎಲ್ಲ ದೇಶಗಳು ಸಾಮಾಜಿಕ, ಆರ್ಥಿಕವಾಗಿ ದಿವಾಳಿಯಾಗಿ ಹೋಗಿವೆ. ಆದರೆ ಭಾರತ ದೇಶದಲ್ಲಿ ಡಾ ಅಂಬೇಡ್ಕರ್ ರಚಿಸಿದ ಸಂವಿಧಾನ ಇರುವ ಕಾರಣ ಸುಭದ್ರವಾಗಿದೆ. ಇಂಧಿರಾ ಗಾಂಧಿ ಅವರ ಹತ್ಯೆ ನಂತರವು ಅಧಿಕಾರ ಹಸ್ತಾಂತರದಲ್ಲಿ ತೊಂದರೆ ಆಗಲಿಲ್ಲ. ಅದಕ್ಕೆ ಗಟ್ಟಿ ಪ್ರಜಾಪ್ರಭುತ್ವವೇ ಕಾರಣ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.ಬಾಕ್ಸ್: ಸಂವಿಧಾನ ಪರಿಪೂರ್ಣ, ಸಕಾರಾತ್ಮಕ ಬಳಕೆ ಆಗದಿದ್ದರೂ ಉದ್ದೇಶ ಈಡೇರುವುದಿಲ್ಲ. ಸಂವಿಧಾನ ಉತ್ತಮ್ಮರ ಕೈಯಲ್ಲಿ ಇರಬೇಕು. ಅಧಮರ ಕೈಗೆ ಸಿಕ್ಕರೆ ದೇಶ ನಾಶವಾಗುತ್ತದೆ ಎಂದು ಸಚಿವರು ಹೇಳಿದರು.ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರು ಮಾತನಾಡಿ, ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ತಮ್ಮ ವೈಯಕ್ತಿಕ ಅಭಿವೃದ್ಧಿಗೆ ಬದುಕದೇ ಸಾಮಾಜಿಕ ಅಭಿವೃದ್ಧಿಗೆ ಬದುಕಿದವರು. ಈ ಇಬ್ಬರು ಮಹನೀಯರು ಲಕ್ಷ್ಮಿ ಪುತ್ರರಲ್ಲ. ಸರಸ್ವತಿ ಪುತ್ರರು ಆಗಿದ್ದರು ಎಂದರು.ಅಂಬೇಡ್ಕರ್ ಅವರ ಸಾಧನೆ ಪರಿಗಣಿಸಿ ಅಂದಿನ ಪ್ರಧಾನಿ ವಾಜಪೇಯಿ ಅವರು ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಅದೇ ರೀತಿ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ 5 ಕ್ಷೇತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪಂಚ ತೀರ್ಥ ಸ್ಥಳಗಳನ್ನಾಗಿ ಅಭಿವೃದ್ಧಿ ಪಡಿಸಿದರು ಎಂದು ವಿವರಿಸಿದರು.ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಕವಿತೆಗಳ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಅಂಬೇಡ್ಕರ್ ಕವಿತೆ ಕವನ ಸಂಪಾದಕ ಮಂಡಳಿಯ ಸದಸ್ಯರನ್ನು ಸನ್ಮಾನಿಸಲಾಯಿತು.ಬಾಬಾ ಅಂಬೇಡ್ಕರ್ ಭಾರತದ ಬಾಸ್ಕರ ಎಂಬ ಗೀತೆಯನ್ನು ಸೃಷ್ಟಿ ಜನಪದ ಕಲಾತಂಡದ ರಮೇಶ ಕಾಳೆ ಹಾಗೂ ದಲಿತಾ ಕಲಾ ಮಂಡಳಿಯ ಶರೀಷ್ ಬಿಳಿಯಲಿ ಹಾಗೂ ಸಂಗಡಿಗರು ಹಾಡಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ ಪೋತದಾರ ಅವರು ಭಾರತದ ದಿವ್ಯ ಚೇತನ ಸಕಲರಿಗೂ ಸ್ಪೂರ್ತಿ ಸಿಂಚನ ಎಂಬ ಭೀಮ ಗೀತೆ ಹಾಡುವ ಮೂಲಕ ಜಾಗೃತಿಗೊಳಿಸಿದರು. ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಡಾ. ಪ್ರಶಾಂತ ಜೆ.ಸಿ.ಅವರು ಡಾ. ಬಿ.ಆರ್.ಅಂಬೇಡ್ಕರ ಕುರಿತು ಉಪನ್ಯಾಸ ನೀಇಡಿದರು. ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಚಾರ್ಯ ಪ್ರೊ. ಡಿ.ಜಿ. ಜೋಗಣ್ಣನವರ ಹಾಗೂ ನಿವೃತ್ತ ಉಪನ್ಯಾಸಕ ಪ್ರೊ. ಸತೀಶ ಪಾಸಿ ಅವರುಗಳು ಡಾ. ಬಾಬು ಜಗಜೀವನರಾಂ ಕುರಿತು ಉಪನ್ಯಾಸ ನೀಡಿದರು.ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲಗಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ, ಎಸ್ ಎನ್ ಬಳ್ಳಾರಿ, ಕೃಷ್ಣ ಪರಾಪೂರ, ಬಸವರಾಜ ಕಡೇಮನಿ, ದುರ್ಗೇಶ್ ವಿಭೂತಿ, ಮಾರ್ತಾಂಡಪ್ಪ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರಾದ ರಾಜಾರಾಮ ಎಸ್ ಪವಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ. ರವಿ ಗುಂಜೀಕರ, ಉಪವಿಭಾಗಾಧಿಕಾರಿ ಗಂಗಪ್ಪ ಸೇರಿದಂತೆ ಇತರರು ಇದ್ದರು.ಭಾವಚಿತ್ರ ಮೆರವಣಿಗೆ: ಡಾ. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಗಳ ಮೆರಣಿಗೆಯು ಗದಗ ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ ಮಾಲಾರೆ್ಣಯೊಂದಿಗೆ ಪ್ರಾರಂಭಗೊಂಡು ಮಹಾತ್ಮಾ ಗಾಂಧಿ ಸರ್ಕಲ್ , ಮಹೇಂದ್ರಕರ ಸರ್ಕಲ್ , ಟಾಂಗಾ ಕೂಟ್, ಬಸವೇಶ್ವರ ಸರ್ಕಲ್, ಗುಜ್ಜರಬಸ್ತಿ , ಮುಳಗುಂದ ನಾಕಾ ಮಾರ್ಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭವನ ತಲುಪಿತು.