ಹಾವೇರಿ 12: ಸಂಘ ಸಂಸ್ಥೆಗಳು, ಖಾಸಗಿ ಉದ್ಯಮಗಳು, ಚುನಾಯಿತ ಪ್ರತಿನಿಧಿಗಳು, ಕೈಗಾರಿಕೆಗಳ ಮಾಲಿಕರು, ನಿಕ್ಷಯ ಮಿತ್ರರಾಗಿ ಕ್ಷಯರೋಗಿಗಳನ್ನು ದತ್ತು ಪಡೆದು ಚಿಕಿತ್ಸೆ ಮುಗಿಯವವರಿಗೆ ಪೌಷ್ಠಿಕ ಆಹಾರದ ಕಿಟ್ಗಳನ್ನು ನೀಡಲು ಮುಂದಾಗಬೇಕು. ಇದರಿಂದ ಕ್ಷಯರೋಗಿಗಳು ಗುಣಮುಖರಾಗಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕ್ಷಯರೋಗಿ ಓರ್ವರಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಚಿಕಿತ್ಸೆ ಪೂರ್ಣಗೊಳಿಸುವವರೆಗೆ ನಿಕ್ಷಯ ಮಿತ್ರರಾಗಿ ಪೌಷ್ಠಿಕ ಆಹಾರ ಕಿಟ್ಗಳನ್ನು ವಿತರಿಸಬೇಕೆಂದು ಎಂದು ಸಲಹೆ ನೀಡಿದರು. ಡಾ.ನಿಲೇಶ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.