ಮಕ್ಕಳ ಜೀವನದಲ್ಲಿ ಶಿಕ್ಷಣ ಅತ್ಯಂತ ಮುಖ್ಯ: ತಿರ್ಲಾಪುರ

Education is the most important thing in a child's life: Tirlapura

ಬೆಳಗಾವಿ 01: ಮಕ್ಕಳ ಜೀವನದಲ್ಲಿ ಶಿಕ್ಷಣ ಅತ್ಯಂತ ಪ್ರಾಮುಖ್ಯತೆಯ ವಿಷಯವಾಗಿದೆ.  ವಿದ್ಯಾರ್ಥಿಯು ಸಮಾಜದಲ್ಲಿ ಸಂಸ್ಕೃತಿ, ನೈತಿಕ ಮೌಲ್ಯ ಬೆಳೆಸಿಕೊಳ್ಳಬೇಕಾದರೆ ಶಿಕ್ಷಣ ಅವಶ್ಯಕ. ವಿದ್ಯಾಭ್ಯಾಸವು ಮಕ್ಕಳಿಗೆ ಉತ್ತಮ ಉದ್ಯೋಗ, ಬದುಕಿನಲ್ಲಿ ಯಶಸ್ಸು ಹಾಗೂ ಉನ್ನತ ಜೀವನವನ್ನು ತಲುಪಲು ದಾರಿಮಾಡಿಕೊಡುತ್ತದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಮಾಜಿ ಮೌಲ್ಯಮಾಪನ ವಿಭಾಗದ ರಜಿಸ್ಟ್ರಾರ್ ಡಾ. ವಿಜಯಲಕ್ಷ್ಮಿ ಎಮ್‌. ತಿರ್ಲಾಪುರ ಅವರು ಹೇಳಿದರು. 

ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪದವಿ-ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರವಿವಾರ ದಿ. 01ರಂದು ಮಹಾವಿದ್ಯಾಲಯದ ಆವರಣದಲ್ಲಿ ಜರುಗಿದ 2025-26 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡುತ್ತಿದ್ದರು. 

ತಂದೆ ತಾಯಿಯ ಪರಿಶ್ರಮವನ್ನು ವ್ಯರ್ಥ ಮಾಡದೆ ಅರ್ಥವಿರುವ ಜೀವನ ನಡೆಸಿ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಹೊರಹೊಮ್ಮಬೇಕೆಂದು ತಿರ್ಲಾಪುರ ಅವರು ಸಲಹೆ ನೀಡಿದರು.  

ಇದೇ ಸಂದರ್ಭದಲ್ಲಿ ಡಾ. ಸಿ.ಎನ್‌. ನಾಯ್ಕರ ಅವರ ಹುಟ್ಟು ಹಬ್ಬ ಆಚರಿಸಲಾಯಿತು. ಮತ್ತು ಪ್ರಥಮ ಹಾಗೂ ದ್ವೀತಿಯ ಪಿಯುಸಿಯ ಮಾರ್ಚ-2025ರ ವಾರ್ಷಿಕ ಪರೀಕ್ಷೇಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳ ಶೈಕ್ಷಣಿಕ ಸಾಧನೆಗೆ ಕಾರಣಿಭೂತರಾದ ಸಂಸ್ಥೆಯ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಲಾಯಿತು. 

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಸಿ.ಎನ್‌.ನಾಯ್ಕರ ಅವರು ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ನಾಯ್ಕರ ಶಿಕ್ಷಣ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಕಲಿಕೆ ್ಘ ಕೌಶಲ ಎರಡಕ್ಕೂ ಸಮಾನ ಒತ್ತು ನೀಡಿದ್ದು, ಪಠ್ಯೇತರ ಚಟುವಟಿಕೆ, ಮಾನವೀಯ ಮೌಲ್ಯಗಳನ್ನು ಒಳಗೊಂಡ ನೈತಿಕ ಶಿಕ್ಷಣವನ್ನು ಕೂಡ ನೀಡುತ್ತಿದೆ. ಒಳ್ಳೆಯ ಕ್ಯಾಂಪಸ್ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ ಉತ್ತಮ ಸಾಧಕರು ಹಾಗೂ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಮಹಾವಿದ್ಯಾಲಯದ ಆಡಳಿತ ಮಂಡಳಿಯು ಹೊಂದಿದೆ ಎಂದು ಹೇಳಿದರು. 

ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ನಾಯ್ಕರ ಅವರು ಮಾತನಾಡುತ್ತಾ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗಾಗಿ ಪೂರಕ ಅವಶ್ಯಕತೆಗಳನ್ನು ಮಹಾವಿದ್ಯಾಲಯ ಪೂರೈಸುವುದಾಗಿ ಭರವಸೆ ನೀಡಿದರು.