ಹಾವೇರಿ10: ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಹಾವೇರಿ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆ ಕಾರ್ಯ ಬರದಿಂದ ಸಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಫೆಬ್ರುವರಿ 11, 12 ಹಾಗೂ 13 ರಂದು ಮೂರುದಿಗಳ ಕಾಲ ನಡೆಯಲಿದೆ. ಫೆಬ್ರುವರಿ 11 ರ ಮೊದಲ ದಿನ ಜಿಲ್ಲಾ ಜಾನಪದ ಜಾತ್ರೆ ಹಾಗೂ ಫೆ.13 ರಂದು ರಾಜ್ಯ ಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮ ಜರುಗಲಿದೆ.
ಫೆಬ್ರುವರಿ 11 ರಂದು ಮಧ್ಯಾಹ್ನ 3 ಗಂಟೆಗೆಯಿಂದ ಜಾನಪದ ಸ್ಪಧರ್ೆಗಳು ಆರಂಭಗೊಳ್ಳಲಿವೆ. ಮೊದಲ ದಿನ ಸೋಬಾನೆ ಪದಗಳ ಸ್ಪಧರ್ೆಗಳು ಜರುಗಲಿವೆ. ಸಂಜೆ 5 ಗಂಟೆಗೆ ಜಿಲ್ಲಾ ಮಟ್ಟದ ಜಾನಪದ ಜಾತ್ರೆ ಉದ್ಘಾಟನಾ ಸಮಾರಂಭ, ಸಂಜೆ 6 ಗಂಟೆಗೆ ಸ್ಥಳೀಯ ಕಲಾವಿದರು, ಶಾಲಾ ಮಕ್ಕಳು, ಯುವಕ ಮಂಡಳಗಳಿಂದ ಜಾನಪದ ಕಲಾ ಪ್ರದರ್ಶನ ಜರುಗಲಿವೆ.
ಫೆ.12 ರಂದು ಮಧ್ಯಾಹ್ನ 3 ಗಂಟೆಗೆ ಭಜನಾ ಸ್ಪಧರ್ೆ, ಸಂಜೆ 6 ಗಂಟೆಗೆ ಸ್ಥಳೀಯ ಕಲಾವಿದರು, ಶಾಲಾ ಮಕ್ಕಳು, ಯುವಕ ಮಂಡಳಗಳಿಂದ ಜಾನಪದ ಕಲಾ ಪ್ರದರ್ಶನ ಜರುಗಲಿವೆ.
ಫೆ.13 ರಂದು ಮಧ್ಯಾಹ್ನ 2 ಗಂಟೆಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಪುರಸಿದೇಶ್ವರ ಕುಸ್ತಿ ಕಮೀಟಿ ಸಹಯೋಗದಲ್ಲಿ ಭಾರೀ ಬಯಲು ಜಂಗಿ ಕುಸ್ತಿಗಳು ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಶ್ರೀ ಮುರುಘರಾಜೇಂದ್ರ ಮಠದಿಂದ ಜಾನಪದವಾಹಿನಿ ಆರಂಭಗೊಂಡು ದಿ.ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದವರೆಗೆ ಜರುಗಲಿದೆ. ಸಂಜೆ 5 ಗಂಟೆಗೆ ರಾಜ್ಯ ಮಟ್ಟದ ಜಾನಪದ ಜಾತ್ರೆ ಉದ್ಘಾಟನಾ ಸಮಾರಂಭ, ಸಂಜೆ 6 ಗಂಟೆಗೆ ರಾಜ್ಯದ ವಿವಿಧ ಜಾನಪದ ಕಲಾತಂಡಗಳಿಂದ ಕಲಾ ಪ್ರದರ್ಶನಗಳು ಜರುಗಲಿವೆ.
ವಿಶೇಷ ಆಕರ್ಷಣೆ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಂದ ವಿವಿಧ ಜಾನಪದ ಕಲಾ ಪ್ರದರ್ಶನ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಕುಸ್ತಿ ಪಂದ್ಯಾವಳಿ, ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳುಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರಿಂದ ಕುಂಭಮೇಳ ಹಾಗೂ ರಂಗೋಲಿ ಪ್ರದರ್ಶನ ಆಯೋಜಿಸಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಅವರು ಘನ ಉಪಸ್ಥಿತಿಯಲ್ಲಿ ಗೃಹ, ಸಹಕಾರ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರದಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ಗೌರವ ಅತಿಥಿಗಳಾಗಿ ಸಚಿವರಾದ ಬಿ.ಸಿ.ಪಾಟೀಲ ಅವರು ಭಾಗವಹಿಸಲಿದ್ದು, ಶಾಸಕರಾದ ನೆಹರು ಓಲೇಕಾರ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕನರ್ಾಟಕ ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಯು.ಬಿ. ಬಣಕಾರ, ಲೋಕಸಭಾ ಸದಸ್ಯರಾದ ಶಿವಕುಮಾರ ಉದಾಸಿ, ವಿಧಾನ ಪರಿಷತ್ನ ಶಾಸಕರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ವಿಧಾನಸಭೆ ಶಾಸಕರಾದ ಸಿ.ಎಂ.ಉದಾಸಿ, ವಿಧಾನ ಪರಿಷತ್ನ ಶಾಸಕರಾದ ಎಸ್.ವಿ.ಸಂಕನೂರು, ಪ್ರದೀಪ ಶೆಟ್ಟರ್, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರು(ಪೂಜಾರ), ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಗಿರಿಜಮ್ಮ ಬ್ಯಾಲದಹಳ್ಳಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕಮಲವ್ವ ಹೇಮನಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ ಸಂಗೂರು ಅವರು ಪಾಲ್ಗೊಳ್ಳಲಿದ್ದಾರೆ. ನಗರದ ಹುಕ್ಕೇರಿಮಠದ ಸದಾಶಿವ ಶ್ರೀಗಳು, ಹೊಸಮಠದ ಬಸವಶಾಂತಲಿಂಗ ಶ್ರೀಗಳು, ಹರಸೂರು ಬಣ್ಣದಮಠದ ರುದ್ರಚನ್ನಮಲ್ಲಿಕಾಜರ್ುನ ಶ್ರೀಗಳು ಹಾಗೂ ಗೌರಿಮಠದ ಶಿವಯೋಗಿ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕರು ತಿಳಿಸಿದ್ದಾರೆ.