29ರಿಂದ ಸಾಮಾನ್ಯ ಪ್ರವೇಶ ಪರೀಕ್ಷೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಕೊಪ್ಪಳ 26: ವೃತ್ತಿಪರ ಕೋರ್ಸ್ ಗಳಿಗೆ 2019ನೇ ಸಾಲಿನ ಸಾಮಾನ್ಯ (ಸಿಇಟಿ) ಪ್ರವೇಶ ಪರೀಕ್ಷೆಗಳು ಏ. 29 ಮತ್ತು 30 ರಂದು ಕೊಪ್ಪಳದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಅವರು ಸಂಬಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾಮಾನ್ಯ ಪ್ರವೇಶ ಪರೀಕ್ಷೆಗಳ ನಿಮಿತ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 

ವೃತ್ತಿಪರ ಕೋಸರ್್ಗಳಿಗೆ ಏ. 29 ಮತ್ತು 30 ರಂದು ನಡೆಯುವ ಸಿಇಟಿ ಪರೀಕ್ಷೆಗಳು ಸುಗಮವಾಗಿ ಹಾಗೂ ಕಟ್ಟುನಿಟ್ಟಾಗಿ ಜರುಗಬೇಕು.  ಪ್ರಶ್ನೆಪತ್ರಿಕೆ ಹಾಗೂ ಇತರೆ ರಹಸ್ಯ ಬಂಡಲ್ಗಳು ಬೆಂಗಳೂರಿನಿಂದ ಜಿಲ್ಲಾ ಖಜಾನೆಗೆ ಬರಲಿದ್ದು, ತ್ರಿ-ಸದಸ್ಯ ಸಮಿತಿಯವರು ಸ್ವೀಕರಿಸಿ ಖಜಾನೆಯಲ್ಲಿ ಠೇವಣಿ ಇರಿಸಬೇಕು.  ಅಲ್ಲದೆ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯದೊಳಗೆ ಸರಿಯಾಗಿ ಭದ್ರತಾ ಸಿಬ್ಬಂದಿ ಹಾಗೂ ಜವಾಬ್ದಾರಿ ವಹಿಸಿರುವ ಅಧಿಕಾರಿಗಳೊಂದಿಗೆ ತಲುಪಿಸುವ ವ್ಯವಸ್ಥೆ ಆಗಬೇಕು.  ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅವ್ಯವಹಾರಗಳು ನಡೆಯದಂತೆ ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು, ಪೊಲೀಸ್ ಬಂದೋಬಸ್ತ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನಲ್ಲಿ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು.  ಕೊಠಡಿ ಹೊರಗೆ ಹಾಗೂ ಪರೀಕ್ಷಾ ಕೇಂದ್ರದ ಕಾರಿಡಾರನಲ್ಲಿ ಮತ್ತು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಸುವುದು ಆಗಬಾರದು.  ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯಥರ್ಿಗಳಿಗೆ ಸಮರ್ಪಕ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.  ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ, ನಿಯೋಜಿತ ಅಧಿಕಾರಿಗಳು ಮತ್ತು ಪರೀಕ್ಷೆ ಬರೆಯುವ ಅಭ್ಯಥರ್ಿಗಳ ಹೊರತಾಗಿ ಇತರರಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶವನ್ನು ನೀಡಬಾರದು.  ಮೊಬೈಲ್, ಕೈ ಗಡಿಯಾರ, ಲ್ಯಾಪ್ಟಾಪ್ ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯಾಗಬಾರದು.  ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಗಳಿಗೆ ಗೋಡೆ ಗಡಿಯಾರವನ್ನು ಕಡ್ಡಾಯವಾಗಿ ಅಳವಡಿಸಬೇಕು.  ಪರೀಕ್ಷೆ ಪ್ರಾರಂಭಕ್ಕೂ ಮುಂಚೆ ಮಾಧ್ಯಮದಕ್ಕೆ ಫೋಟೋಗೆ ಅವಕಾಶವಿದೆ.  ಆದರೆ ಪರೀಕ್ಷೆ ಪ್ರಾರಂಭವಾದ ಕೂಡಲೇ ಯಾರಿಗೂ ಪ್ರವೇಶವಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಅವರು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೇಶಕ ಎಲ್.ಜಿ ರಾಟಿಮನಿ ಅವರು ಮಾತನಾಡಿ, ವೃತ್ತಿಪರ ಕೋಸರ್್ಗಳಿಗೆ 2019ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏ. 29 ಮತ್ತು 30 ರಂದು ಕೊಪ್ಪಳ ನಗರದ 06 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 2187 ಅಭ್ಯಥರ್ಿಗಳು ಪರೀಕ್ಷೆ ಬರೆಯಲಿದ್ದಾರೆ.  ಏ. 29 ಬೆಳಿಗ್ಗೆ 10-30 ರಿಂದ 11-50 ಗಂಟೆಯವರೆಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 02-30 ರಿಂದ 03-50 ಗಂಟೆಯವರೆಗೆ ಗಣಿತಶಾಸ್ತ್ರ ಮತ್ತು ಏ. 30 ಬೆಳಿಗ್ಗೆ 10-30 ರಿಂದ 11-50 ಗಂಟೆಯವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 02-30 ರಿಂದ 03-50 ಗಂಟೆಯವರೆಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯುವುದು.  ಪ್ರತಿ ವಿಷಯಕ್ಕೆ 60 ಅಂಕಗಳಿರುತ್ತವೆ.   

ಪರೀಕ್ಷಾ ಕೇಂದ್ರಗಳು: ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ  ಕಾಲೇಜು, ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಬಿ.ಎನ್.ಆರ್.ಕೆ ಪದವಿ ಪೂರ್ವ ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಹಾಗೂ ನವಚೇತನ ಪದವಿ ಪೂರ್ವ ಕಾಲೇಜು ಭಾಗ್ಯನಗರ, ಈ 06 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗಳು ನಡೆಯಲಿವೆ ಎಂದು ಸಭೆಗೆ ಮಹಿತಿ ನೀಡಿದರು.       

ಸಭೆಯಲ್ಲಿ ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕಿ ಆಮಿತಾ ಯರಗೋಳ್ಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕೊಪ್ಪಳ ತಾಲೂಕಿನ ಪರೀಕ್ಷಾ ಕೇಂದ್ರಗಳ ಪ್ರಾಶುಂಪಾಲರು ಉಪಸ್ಥಿತರಿದ್ದರು.