ಶಿಗ್ಗಾವಿ 12 : ಹಾವೇರಿ ಜಿಲ್ಲೆಯ ನೂತನ ಭಾಜಪದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರನ್ನು ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ನರಹರಿ ಕಟ್ಟಿ ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಭಾಜಪ ಶಿಗ್ಗಾವಿ ನಿಕಟಪೂರ್ವ ಅಧ್ಯಕ್ಷ ಹಾಗೂ ವಾ.ಕ.ರ.ಸಾರಿಗೆ ನಿಗಮ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ, ಗ್ರಾ.ಪಂಚಾಯತ ಸದಸ್ಯ ಸಂತೋಷ ದೊಡ್ಡಮನಿ, ಮಾಜಿ ಪುರಸಭೆ ನಾಮ ನಿರ್ದೇಶಿತ ಸದಸ್ಯ ಪ್ರಶಾಂತ ಬಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.