ಹುಬ್ಬಳ್ಳಿ 12 :ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಐಬಿಎಂಆರ್ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಸುಸಂದರ್ಭದಲ್ಲಿ ಐಬಿಎಂಆರ್ನ ಮುಖ್ಯಸ್ಥ ವಿನಯಚಂದ್ರ ಮಹೇಂದ್ರಕರ ಅವರನ್ನು ಭೇಟಿಯಾಗಿ ಐಬಿಎಂಆರ್ ಶಿಕ್ಷಣ ಸಂಸ್ಥೆಯು 25 ವರ್ಷಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಆತ್ಮೀಯವಾಗಿ, ಹುತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸಹನಾ ಸುರೇಶ ಹೊರಕೇರಿಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ಸುಪ್ರಿಯಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯಅಧ್ಯಕ್ಷ ಪ್ರೊ ಎಸ್.ಎಂ.ಸಾತ್ಮಾರ, ಸುಮಾ ಮಹೇಂದ್ರಕರ, ಪ್ರೊ ಸದಾನಂದ ಹಾವನಗಿ, ಸುಧಾಕರಕಟಾವಕರ, ಮುಂತಾದವರುಇದ್ದರು.