ಸಿಂದಗಿ 10: ಹೊನ್ನಳ್ಳಿ ಗ್ರಾಪಂ ಹತ್ತಿರದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿನ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣು ಮನಗೂಳಿ ಆಗ್ರಹಿಸಿದರು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದವರನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಈ ವೇಳೆ ದಸಂಸ ಮುಖಂಡ ಅಶೋಕ ಯಂಟಮಾನ, ಆನಂದ ತಳವಾರ, ಈರಣ್ಣ ಭಜಂತ್ರಿ, ಕುಮಾರ ಭಜಂತ್ರಿ, ಸುರೇಶ ಮಡಿವಾಳರ ಸೇರಿದಂತೆ ಅನೇಕರಿದ್ದರು.