ರೈತನ ಮಗ ಕಾರಖಾನೆ ಎಂಡಿ ಆಗಿದ್ದು ಶ್ಲಾಘನೀಯ: ಪಟ್ಟಣಶೆಟ್ಟಿ

It is commendable that a farmer's son has become the MD of a factory: Pattanashetty

ಸಂಕೇಶ್ವರ 02: ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರಖಾನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ತಮ್ಮ ಕಾರ್ಯದಕ್ಷತೆ ಮೂಲಕ ವ್ಯವಸ್ಥಾಪಕ ನಿರ್ದೇಶಕರಾಗಿ ನಿವೃತ್ತಿ ಹೊಂದುತ್ತಿರುವ ಸಾತಪ್ಪ ಕರ್ಕಿನಾಯಿಕ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಕಾರಖಾನೆ ಉಪಾಧ್ಯಕ್ಷ ಅಶೋಕ ಪಟ್ಟಣಶೆಟ್ಟಿ ಹೇಳಿದರು. 

ಇಂದು ಸ್ಥಳೀಯ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರಖಾನೆ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪ ಕರ್ಕಿನಾಯಿಕ ಸೇವಾ ನಿವೃತ್ತರಾದ ನಿಮಿತ್ತ ಆಡಳಿತ ಮಂಡಳಿ ಪರವಾಗಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ದಿ.ಅಪ್ಪಣಗೌಡ ಪಾಟೀಲ ಸ್ಥಾಪಿಸಿದ ಕಾರಖಾನೆ ಈ ಭಾಗದ ರೈತರ ಮಕ್ಕಳಿಗೆ ವರವಾಗಿದ್ದು, ರೈತನ ಮಗ ಈ ಕಾರಖಾನೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಸೇವೆ ಸಲ್ಲಿಸುವದು ಎಂದರು.ನಿರ್ದೇಶಕ ಶಿವನಾಯಿಕ ನಾಯಿಕ ಮಾತನಾಡಿ, ಬಸವ ತತ್ವದ ಅನುಯಾಯಿಯಾಗಿರುವ ಎಸ್‌.ಆರ್‌. ಕರ್ಕಿನಾಯಿಕ ಕಾಯಕದ ಮೂಲಕ ಕಾರಖಾನೆಯ ಪ್ರಗತಿಗೆ ಸೇವೆ ಸಲ್ಲಿಸಿದ್ದು, ಅವರ ನಿವೃತ್ತಿ ಬದುಕು ಸಮೃದ್ಧತೆಯಿಂದ ಕೂಡಿರಲಿ ಎಂದು ಹಾರೈಸಿದರು. ಸತ್ಕಾರ ಸ್ವೀಕರಿಸಿ ಮಾತನಾಡಿದ ಸಾತಪ್ಪಾ ಕರ್ಕಿನಾಯಿಕ, ಹಿರಣ್ಯಕೇಶಿ ಕಾರಖಾನೆ ತನ್ನದೇ ಇತಿಹಾಸ ಹೊಂದಿದ್ದು ವಿವಿಧ ಹುದ್ದೆಗಳಲ್ಲಿ 28 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ನನಗೆ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುವ ಅವಕಾಶ ಒದಗಿ ಬಂದಿದ್ದು ನನ್ನ ಸೌಭಾಗ್ಯ. ಕಾರಖಾನೆ ಈ ಹಿಂದಿನ ಆಡಳಿತ ಮಂಡಳಿಯಿಂದ ಈವರೆಗೂ, ಕಾರ್ಮಿಕ, ಸಿಬ್ಬಂದಿ ವರ್ಗ ಹಾಗೂ ಸದಸ್ಯರು ಸಹಕಾರ ನೀಡಿದ್ದು ಅವರಿಗೆ ನಾನು ಋಣಿಯಾಗಿದ್ದೇನೆ ಎಂದರು. 

ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಸೇವಾ ನಿವೃತ್ತಿ ಹೊಂದಿದ 11 ಜನ ಸಿಬ್ಬಂದಿಯನ್ನು ಗೌರವಿಸಲಾಯಿತು.ನಿರ್ದೇಶಕ ಬಾಬಾಸಾಹೇಬ ಅರಬೋಳೆ ಮಾತನಾಡಿದರು.ಈ ಸಂದರ್ಭದಲ್ಲಿ ಕಾರಖಾನೆ ಚೇಅರಮನ್ ಬಸವರಾಜ ಕಲ್ಲಟ್ಟಿ, ನಿರ್ದೇಶಕರಾದ ಬಸವರಾಜ ಮರಡಿ, ಪ್ರಭುದೇವ ಪಾಟೀಲ, ಸುರೇಂದ್ರ ದೊಡಲಿಂಗನವರ, ಜನರಲ್ ಮ್ಯಾನೇಜರ ವೀರನಗೌಡ ದೇಸಾಯಿ, ಕಾರ್ಮಿಕ ಸಂಘಟನೆ ಅಧ್ಯಕ್ಷ ಮೋಹನ ಕೋಠಿವಾಲೆ, ಆಡಳಿತ ಅಧಿಕಾರಿ ರವೀಂದ್ರ ಚೌಗಲಾ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.ಎಂ.ಪಿ.ದೇಸಾಯಿ ಸ್ವಾಗತಿಸಿದರು. ಲಕ್ಷ್ಮಣ ಹಂಚಿನಮನಿ ನಿರೂಪಿಸಿದರು. ಕಛೇರಿ ಅಧೀಕ್ಷಕ ಸುಭಾಷ ನಾಶಿಪುಡಿ ವಂದಿಸಿದರು.