ಧಾರವಾಡ 02: 2024-2025ರ ಶೈಕ್ಷಣಿಕ ವರ್ಷದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ಜೆ.ಇ.ಇಹಿಮೇನ್ಸ್ ಪರೀಕ್ಷೆಯಲ್ಲಿ ಹಾಜರಾಗಿ ಅತ್ಯುತ್ತಮ ಸಾಧನೆಗೈದು ಜೆ.ಇ.ಇ ಅಡ್ವಾನ್ಸ್-್ಡ ಪರೀಕ್ಷೆಗೆ ಅರ್ಹತೆ ಪಡೆದಿದ್ದು, ಈಗ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಧಾರವಾಡ ವಿದ್ಯಾಗಿರಿ ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಕಲಾ, ವಾಣಿಜ್ಯ ಮತ್ತು ವಿಜ್ಷಾನ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ಪ್ರದರ್ಶಿಸಿದೆ.
ಮಹಾವಿದ್ಯಾಲಯದ ವಿದ್ಯಾರ್ಥಿ ನಯನ ರೋಖಡೆ 1008ನೇ ರಾ್ಯಂಕ ಪಡೆದು ಅತ್ಯುತ್ತಮ ಸಾಧನೆಗೈದಿರುತ್ತಾನೆ. ಬಿ.ಅನನ್ಯಾ ಪೈ 5788 ನೇ ರಾ್ಯಂಕ, ಸಮರ್ಥ ಪಾಟೀಲ 12504 ನೇ ರಾ್ಯಂಕ ಹಾಗೂ ಮಣಿಕಂಠ ಸುಂಕದ 6362ನೇ ರಾ್ಯಂಕ(ಇಘಖ) ಪಡೆದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ
ಈ ಸಂಸ್ಥೆಯ ಪ್ರೇರಕ ಶಕ್ತಿಯಾಗಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ, ಕಾರ್ಯದರ್ಶಿ ಡಾ. ಅಜಿತಪ್ರಸಾದ, ಪ್ರಾಚಾರ್ಯ ಭಾರತಿ ಶಾನಭಾಗ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.