ಬೆಳಗಾವಿ : ರಾಷ್ಟ್ರೀಯ ಹೆದ್ದಾರಿಯ ವಿಭಜಕದ ಅಭಿವೃದ್ಧಿ ಮಾಡುತ್ತಿದ್ದ ಹತ್ತಾರು ಬಡ ಕೂಲಿ ಕಾರ್ಮಿಕರ ಮೇಲೆ ಲಾರಿಯೊಂದು ಹರಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿರುವ ಘಟನೆ ಜಿಲ್ಲೆಯ ಇಟಕಿ ಕ್ರಾಸ್ ಬಳಿಯಲ್ಲಿ ನಡೆದಿದೆ.
ರವಿವಾರ ಬೆಳಗಿನ ಜಾವದಿಂದ ರಸ್ತೆ ಅಭಿವೃದ್ಧಿ ಮಾಡುತ್ತಿದ್ದ ಹತ್ತಾರು ಕಾರ್ಮಿಕರ ಮೇಲೆ ಲಾರಿ ಹರಿದಿದೆ. ಈ ಘಟನೆಯಿಂದ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಅಲ್ಲದೆ ಸ್ಥಳಕ್ಕೆ ಕಿತ್ತೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಿಂದ ಟ್ಯಾಂಕರ್ ಟ್ಯಾಂಕರ್ ಲಾರಿ ಸರ್ವೀಸ್ ರಸ್ತೆ ಉರಳಿ ಬಿದ್ದು ಆಯಿಲ್ ಸೋರಿಕೆಯಾಗುತ್ತಿದೆ. ಇದರಿಂದ ಸ್ಥಳದಲ್ಲಿ ಆತಂಕದ ಛಾಯೆ ಆವರಿಸಿದೆ.