ಎಂ.ಕೆ.ಪಾಟೀಲ ನಿಧನ: ಗಣ್ಯರಿಂದ ಸಂತಾಪ
ದೇವರಹಿಪ್ಪರಗಿ 10: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯ ದೇವಸ್ಥಾನದ ಟ್ರಸ್ಟ್ ಕಮಿಟಿಯ ಸದಸ್ಯರು ಹಾಗೂ ಗೌಡಕಿ ಮನೆತನದ ಮುಖಂಡರಾದ ಬಿ.ಕೆ. ಪಾಟೀಲ ಅವರ ಸಹೋದರರಾದ ಮಡಿವಾಳಪ್ಪಗೌಡ.ಕೆ. ಪಾಟೀಲ(64) ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಮಗಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮ ಅವರ ತೋಟದಲ್ಲಿ ಸೋಮವಾರದಂದು ನೆರವೇರಿಸಿದರು.
ಗಣ್ಯರಿಂದ ಸಂತಾಪ: ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕರುಗಳಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ), ಆನಂದಗೌಡ ದೊಡ್ಡಮನಿ, ಕೆಪಿಸಿಸಿ ಸದಸ್ಯರಾದ ಬಿ.ಎಸ್.ಪಾಟೀಲ ಸೇರಿದಂತೆ ಸ್ವಾಮೀಜಿಗಳು, ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.