ಹಾನಗಲ್ 12 :ತಾಲೂಕಿನ ಬಮ್ಮನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಮ್ಮನಹಳ್ಳಿ-ಸವಣೂರು ನೂತನ ಮಾರ್ಗದ ಬಸ್ ಸೇವೆಗೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ ತೋರಿದರು.
ಈ ಮಾರ್ಗದಲ್ಲಿ ಬಸ್ ಓಡಿಸಬೇಕು ಎನ್ನುವ ಬಹುದಿನಗಳ ಬೇಡಿಕೆ ಈಡೇರಿದೆ. ಸವಣೂರು, ಶಿಗ್ಗಾಂವಿ ಮತ್ತು ಹಾನಗಲ್ ತಾಲೂಕಿನ ಜನತೆಗೆ ಇದರಿಂದ ಅನುಕೂಲವಾಗಲಿದೆ. ಕಳೆದ ಸರ್ಕಾರದಲ್ಲಿ ಹಾನಗಲ್ ಸಾರಿಗೆ ಘಟಕಕ್ಕೆ ಒಂದೇ ಒಂದು ಹೊಸ ಬಸ್ ಸಹ ಬಂದಿರಲಿಲ್ಲ. ನಮ್ಮ ಸರ್ಕಾರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು 14 ಹೊಸ ಬಸ್ ಒದಗಿಸಲಾಗಿದ್ದು, ಇದರಿಂದ ಹೊಸ, ಹೊಸ ಮಾರ್ಗಗಳಲ್ಲಿ ಬಸ್ ಓಡಿಸಲು ಅನುಕೂಲವಾಗಿದೆ. ಮತ್ತಷ್ಟು ಹೊಸ ಬಸ್ ನೀಡುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಬಸ್ ನಿತ್ಯ ಬೆಳಗ್ಗೆ 5.45 ಗಂಟೆಗೆ ಬಮ್ಮನಹಳ್ಳಿ ಗ್ರಾಮದಿಂದ ಲಕ್ಕಿಕೊಪ್ಪ, ದೇವರ ಹೊಸಪೇಟೆ,ಹೋತನಹಳ್ಳಿ,ಮಾಸನಕಟ್ಟಿ,ವಳಗೇರಿ, ಗುಡ್ಡದಚನ್ನಾಪುರ, ಬಂಕಾಪುರ ಮಾರ್ಗವಾಗಿ ಸವಣೂರು ತಲುಪಲಿದ್ದು, ರಾತ್ರಿ 8 ಗಂಟೆಗೆ ಇದೇ ಮಾರ್ಗದಿಂದ ವಾಪಸ್ ಬಮ್ಮನಹಳ್ಳಿ ಆಗಮಿಸಲಿದೆ.
ಶಿಗ್ಗಾಂವಿ-ಸವಣೂರು ಶಾಸಕ ಯಾಸೀರಖಾನ್ ಪಠಾಣ,ತಹಶೀಲ್ದಾರ್ ರೇಣುಕಾ ಎಸ್., ಕೆಡಿಪಿ ಸದಸ್ಯ ಮಹ್ಮದಹನೀಫ್ ಬಂಕಾಪೂರ, ಗ್ರಾಪಂ ಸದಸ್ಯರಾದ ಅರುಣ ಮಲ್ಲಮ್ಮನವರ, ಪತಂಗಸಾಬ ಮಕಾನದಾರ, ರಾಮಣ್ಣ ವಡ್ಡರ, ಲಕ್ಷ್ಮೀ ಕಲಾಲ, ಗದಿಗೆವ್ವ ಚಿಕ್ಕಣಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಪದ್ಮಾ ಬೇಂದ್ರೆ, ಮುಖಂಡರಾದ ಚನ್ನಬಸಣ್ಣ ಬಿದರಗಡ್ಡಿ, ನಾಗರಾಜ ಮಲ್ಲಮ್ಮನವರ, ಮಲ್ಲನಗೌಡ ಪಾಟೀಲ, ಚಮನಸಾಬ ಪಾಟೀಲ, ಮಲ್ಲೇಶಪ್ಪ ಕ್ಷೌರದ, ರಾಮಣ್ಣ ರಾಮಜಿ, ಮಾರುತಿ ಮುದುಕಣ್ಣನವರ, ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಚಂದ್ರ್ಪ ಜಾಲಗಾರ,ಈರಣ್ಣ ಬೈಲವಾಳ, ಭರಮಣ್ಣ ಶಿವೂರ, ಆದರ್ಶ ಶೆಟ್ಟಿ ಸೇರಿದಂತೆ ಇನ್ನೂ ಹಲವರು ಇದ್ದರು.