ಬಳ್ಳಾರಿಯಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಪರಿಸರ ಉಳಿಸಿ, ಬೆಳೆಸೋಣ: ನ್ಯಾ.ರಾಜೇಶ್ ಎನ್‌.ಹೊಸಮನೆ ಕೆರೆ

Meaningful World Environment Day celebration in Bellary Let's save and nurture the environment: Just

ಬಳ್ಳಾರಿಯಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಪರಿಸರ ಉಳಿಸಿ, ಬೆಳೆಸೋಣ: ನ್ಯಾ.ರಾಜೇಶ್ ಎನ್‌.ಹೊಸಮನೆ ಕೆರೆ

ಬಳ್ಳಾರಿ 05: ಭೂಮಿಯ ಮೇಲೆ ಇರುವ ಸಜೀವ ಮತ್ತು ನೀರ್ಜೀವ ವಸ್ತು ಸೇರಿದರೆ ಅದು ಪರಿಸರ. ಪರಿಸರವು ದೇವರಿದ್ದಂತೆ, ಹಾಗಾಗಿ ಪರಿಸರವನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್‌.ಹೊಸಮನೆ ಅವರು ಕರೆ ನೀಡಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರಿ​‍್ಡಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಭೂಮಿಗೆ 5 ಬಿಲಿಯನ್ ವರ್ಷಗಳ ಇತಿಹಾಸವಿದೆ. ಪ್ರಕೃತಿಯಲ್ಲಿನ ಕೀಟ, ಜಂತು, ಬ್ಯಾಕ್ಟೀರಿಯಾಗಳು, ಪ್ರಾಣಿ-ಪಕ್ಷಿಗಳು, ಸಕಲ ಜಲಚರ ಜೀವಿಗಳೆಲ್ಲವೂ ಮನುಷ್ಯನ ಬದುಕಿಗೆ ಪೂರಕವಾಗಿದ್ದು, ಅದರಲ್ಲಿ ಪರಿಸರವು ಮುಖ್ಯವಾಗುತ್ತದೆ. ಪರಿಸರಕ್ಕೆ ಮಾನವನ ಅಗತ್ಯವಿಲ್ಲ, ಆದರೆ ಮಾನವನಿಗೆ ಪರಿಸರವು ಅತೀ ಮುಖ್ಯವಾಗುತ್ತದೆ ಎಂಬುದನ್ನು ನಾವೆಲ್ಲರೂ ಅರ್ಥೈಸಿಕೊಳ್ಳಬೇಕು ಎಂದರು.ಪ್ರಸ್ತುತ ವಿದ್ಯಮಾನದಲ್ಲಿ ಮಾನವನು ಅನೇಕ ಆವಿಷ್ಕಾರಗಳಿಂದ ಅತೀ ಮುಂಚೂಣಿಯಾಗಿ ಮುಂದುವರೆಯುತ್ತಿದ್ದಾನೆ. ಸ್ವಲ್ಪ ನಿಧಾನಗತಿಯಲ್ಲಿ ಚಲಿಸಿದರೆ ಉತ್ತಮ ಎಂದು ಅವರು ಅಭಿಪ್ರಾಯ ಪಟ್ಟರು.ಮಾನವನ ಅಗತ್ಯೆಗಳಿಗಾಗಿ ಒಂದು ಮರವನ್ನು ಕಟಾವು ಮಾಡಿದರೆ, ಮುಂದೆ 20 ಗಿಡಗಳನ್ನು ನೆಟ್ಟು ಪೋಷಿಸುವ ಸಂಕಲ್ಪ ಹೊಂದಬೇಕು. ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ-ಮುತ್ತ ಆವರಣದಲ್ಲಿ ಜಾಗವಿದ್ದರೆ ಗಿಡ ನೆಟ್ಟು ಬೆಳೆಸುವ ಕಾರ್ಯ ಮಾಡಬೇಕು ಎಂದು ಕಿವಿಮಾತು ಹೇಳಿದರು.ಈ ವರ್ಷದ ಘೋಷವಾಕ್ಯವಾದ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬಂತೆ ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆಗೊಳಿಸಲು ಪಣತೊಡೋಣ ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಪಂಚದಲ್ಲಿ ಸಕಲ ಜೀವಿಗಳ ಏಳಿಗೆಗೆ ಪರಿಸರವು ಅತ್ಯಾವಕಾಶವಾಗಿದ್ದು, ಪರಿಸರ ಇಲ್ಲದಿದ್ದರೆ ನಾವಿಲ್ಲ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅದನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ನೀಡೋಣ ಎಂದು ಅವರು ಹೇಳಿದರು. 

ಕಾರ್ಯಕ್ರಮದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರೌಢ ಮತ್ತು ಕಾಲೇಜು ಮಟ್ಟದಲ್ಲಿ ಏರಿ​‍್ಡಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣ ಪತ್ರ ಮತ್ತು ಗಿಡ ವಿತರಿಸಲಾಯಿತು.ಕಾರ್ಯಕ್ರಮಕ್ಕೂ ಮುನ್ನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಆವರಣದಲ್ಲಿ ಗಣ್ಯರು ಗಿಡ ನೆಟ್ಟು ನೀರುಣಿಸಿದರು.ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಅಂತರ್ಜಲ ಇಲಾಖೆಯ ಹಿರಿಯ ಭೂ ವಿಜ್ಞಾನಿ ಅರುಣ್‌.ವಿ., ಬಳ್ಳಾರಿ ಬಿಸಿನೆಸ್ ಕಾಲೇಜಿನ ನಿರ್ದೇಶಕ ಅಮರ್ ರಾಜ್ ಭೂಪಾಲ್, ಕನ್ನಡ ಉಪನ್ಯಾಸಕ ಪ್ರಭಾಕರ್ ಜೋಯಿಸ್ ಮತ್ತು ಸ್ಮಯೋರ್ ಕಂಪನಿಯ ಸಿಒಒ ಮಂಜುನಾಥ, ಜಿಲ್ಲಾ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿಭಾಗದ ತರಬೇತಿದಾರ ನಾಗರಾಜ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.