ಶಿಗ್ಗಾವಿ 02 : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಯಾಶೀರಖಾನ ಪಠಾಣ ಅವರ ನೇತೃತ್ವದಲ್ಲಿ ರೋಗಿಗಳಿಗೆ ಹಾಲು ಹಣ್ಣು ಹಂಪಲು ವಿತರಿಸಲಾಯಿತು.
ಜೊತೆಗೆ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮ ಅಚರಿಸಲಾಯಿತು. ಈ ಸಂದರ್ಭದಲ್ಲಿ ಸವಣೂರ ತಾಲೂಕ ಕೆ.ಎಂ.ಎಫ್ ನಿರ್ದೇಶಕ ಹಾಗೂ ಸಿ ಬಿ ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷೆ ಶಶಿಧರ ಯಲಿಗಾರ, ಶಿಗ್ಗಾವಿ ತಾಲೂಕ ಕೆ.ಎಂ.ಎಫ್ ನಿರ್ದೇಶಕ ತಿಪ್ಪಣ್ಣಾ ಸಾತಣ್ಣವರ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಗುಡ್ಡಪ್ಪ ಜಲದಿ, ಎಸ್ ಎಫ್ ಮಣಕಟ್ಟಿ, ಗೌಸಖಾನ ಮುನಶಿ, ಮುನ್ನಾ ಲಕ್ಷ್ಮೇಶ್ವರ, ಮಲ್ಲಮ್ಮ ಸೋಮನಕಟ್ಟಿ , ಮಾಲತೇಶ ಶಾಲಿ, ಅತ್ತಾವುಲ್ಲಾ ಖಾಜೇಖಾನವರ, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆ.ಎಂ.ಎಫ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.